‘ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ವಿದ್ಯಮಾನ ನಗರದಲ್ಲಿ ಏಪ್ರಿಲ್ 20ರಂದು ಬಾಡಿಗೆ ಕೇಳುವ ನೆಪದಲ್ಲಿ ವೃದ್ಧೆಯೊಬ್ಬರ ಮೇಲೆ ಹಲ್ಲೆ ಮಾಡಿ, 48 ಗ್ರಾಂ ಚಿನ್ನದ ಸರ ಸುಲಿಗೆ ಮಾಡಲಾಗಿತ್ತು. ಗಾಯಗೊಂಡ ವೃದ್ಧೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರು ನೀಡಿದ್ದ ದೂರಿನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.