<p><strong>ಕೆ.ಆರ್.ಪುರ:</strong> ನೈಜ ರಾಷ್ಟ್ರ ಪ್ರೇಮಿಗಳಾಗಿದ್ದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಸ್ಮರಣೆ ಎಲ್ಲರೂ ಮಾಡಬೇಕಿದೆ ಎಂದು ಸಿಲಿಕಾನ್ ಸಿಟಿ ಕಾಲೇಜು ಅಧ್ಯಕ್ಷ ಚಂದ್ರಶೇಖರ್ ಹೇಳಿದರು.</p>.<p>ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಮೂವರು ಸ್ವಾತಂತ್ರ್ಯ ಹೋರಾಟಗಾರರು ಸೈದ್ಧಾಂತಿಕವಾಗಿ ಬಹಳಷ್ಟು ಪ್ರಬುದ್ಧರಾಗಿದ್ದರು. ದೇಶದ ಜನರ ನಾಡಿ ಮಿಡಿತವನ್ನು ಬಲ್ಲವರಾಗಿದ್ದರಿಂದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದರು. ಶೋಷಣೆ ಇಲ್ಲದ ಸಮಾಜ ಸ್ಥಾಪಿಸಬೇಕೆಂದು ಕನಸು ಕಂಡಿದ್ದರು ಎಂದು ವಿವರಿಸಿದರು.</p>.<p>ರೆಡ್ಕ್ರಾಸ್ ಸೊಸೈಟಿ, ರೋಟರ್ಯಾಕ್ಟ್ ಕ್ಲಬ್, ರೋಟರಿ ಮಾನ್ಯತಾ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಮುಖಂಡ ಬಿ. ಅಮರನಾಥ್ ರೆಡ್ಡಿ, ಕಾಲೇಜು ನಿರ್ದೇಶಕ ಮುಕುಂದ, ಸಿಇಒ ಧನ್ಯತೇಜಸ್, ಭಾನು ಪ್ರದ್ಯುಮ್ನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ನೈಜ ರಾಷ್ಟ್ರ ಪ್ರೇಮಿಗಳಾಗಿದ್ದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಸ್ಮರಣೆ ಎಲ್ಲರೂ ಮಾಡಬೇಕಿದೆ ಎಂದು ಸಿಲಿಕಾನ್ ಸಿಟಿ ಕಾಲೇಜು ಅಧ್ಯಕ್ಷ ಚಂದ್ರಶೇಖರ್ ಹೇಳಿದರು.</p>.<p>ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಮೂವರು ಸ್ವಾತಂತ್ರ್ಯ ಹೋರಾಟಗಾರರು ಸೈದ್ಧಾಂತಿಕವಾಗಿ ಬಹಳಷ್ಟು ಪ್ರಬುದ್ಧರಾಗಿದ್ದರು. ದೇಶದ ಜನರ ನಾಡಿ ಮಿಡಿತವನ್ನು ಬಲ್ಲವರಾಗಿದ್ದರಿಂದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದರು. ಶೋಷಣೆ ಇಲ್ಲದ ಸಮಾಜ ಸ್ಥಾಪಿಸಬೇಕೆಂದು ಕನಸು ಕಂಡಿದ್ದರು ಎಂದು ವಿವರಿಸಿದರು.</p>.<p>ರೆಡ್ಕ್ರಾಸ್ ಸೊಸೈಟಿ, ರೋಟರ್ಯಾಕ್ಟ್ ಕ್ಲಬ್, ರೋಟರಿ ಮಾನ್ಯತಾ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಮುಖಂಡ ಬಿ. ಅಮರನಾಥ್ ರೆಡ್ಡಿ, ಕಾಲೇಜು ನಿರ್ದೇಶಕ ಮುಕುಂದ, ಸಿಇಒ ಧನ್ಯತೇಜಸ್, ಭಾನು ಪ್ರದ್ಯುಮ್ನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>