<p><strong>ಬೆಂಗಳೂರು:</strong> ‘ಭಗವದ್ಗೀತೆ ಮನೆಯಲ್ಲಿದ್ದರೆ ಬೇರೆ ಸಮಾಲೋಚಕರ ಅಗತ್ಯವಿಲ್ಲ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಹೇಳಿದರು.</p>.<p>ಮಲ್ಲೇಶ್ವರ ಬ್ರಾಹ್ಮಣ ಸಭಾ ಟ್ರಸ್ಟ್, ಮಲ್ಲೇಶ್ವರ ಸಿವಿಕ್ ಮ್ಯಾನೇಜ್ಮೆಂಟ್ ಕಮಿಟಿ ಸೋಮವಾರ ಆಯೋಜಿಸಿದ್ದ ಗೀತಾ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಭಗವದ್ಗೀತೆ ಭಗವಂತನಿಂದ ಉಕ್ತವಾದದ್ದು. ಅದನ್ನು ಓದಿ ಅರ್ಥೈಸಿಕೊಂಡರೆ ಸಾಕು. ಪ್ರತಿಯೊಬ್ಬರ ದ್ವಂದ್ವಗಳಿಗೆ ಪರಿಹಾರ ಇದರಲ್ಲಿದೆ. ಇಂದಿಗೂ ಶ್ರೀಕೃಷ್ಣ ಅತ್ಯುತ್ತಮ ಆಪ್ತ ಸಲಹೆಗಾರ ಎಂದರು.</p>.<p>ಇಂದಿನ ಜನಾಂಗ ಖಿನ್ನತೆ ಎಂದು ಮಾತ್ರೆೆಗಳನ್ನು ತೆಗೆದುಕೊಳ್ಳುವುದು, ಆತ್ಮಹತ್ಯೆೆಗೆ ಮುಂದಾಗುವುದನ್ನು ಕಾಣುತ್ತಿದ್ದೇವೆ. ಯಾವುದೇ ಕಾರಣಕ್ಕೂ ವಿಪರೀತ ಕ್ರಮಗಳಿಗೆ ಮುಂದಾಗದೆ ಭಗವದ್ಗೀತೆ ಪಠಣವನ್ನು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಜಿ. ಭೀಮೇಶ್ವರ ಜೋಶಿ ಮಾತನಾಡಿ, ‘ಭಗವದ್ಗೀತೆಯನ್ನು ಮನೆಯಲ್ಲಿ ಪೂಜೆಗೆ ಸೀಮಿತವಾಗಿರಿಸದೆ, ಪಠಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಃಖ ಮತ್ತು ಸಂತೋಷದಲ್ಲೂ ಭಗವದ್ಗೀತೆ ಬದುಕಿನ ಗೀತೆಯಾಗಬೇಕು’ ಎಂದು ಆಶಿಸಿದರು. </p>.<p>ನಿವೃತ್ತ ನ್ಯಾಯಮೂರ್ತಿ ಕೆ.ವಿ. ನರಸಿಂಹನ್, ಶೇಷಾದ್ರಿಪುರ ಶಿಕ್ಷಣ ಸಂಸ್ಥೆೆಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ಜ್ಯೋತಿಷಿ ಬಿ. ಎಸ್. ದ್ವಾರಕಾನಾಥ್, ಮಲ್ಲೇಶ್ವರ ಬ್ರಾಹ್ಮಣ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಪಾವಗಡ ಪ್ರಕಾಶ್ ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭಗವದ್ಗೀತೆ ಮನೆಯಲ್ಲಿದ್ದರೆ ಬೇರೆ ಸಮಾಲೋಚಕರ ಅಗತ್ಯವಿಲ್ಲ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಹೇಳಿದರು.</p>.<p>ಮಲ್ಲೇಶ್ವರ ಬ್ರಾಹ್ಮಣ ಸಭಾ ಟ್ರಸ್ಟ್, ಮಲ್ಲೇಶ್ವರ ಸಿವಿಕ್ ಮ್ಯಾನೇಜ್ಮೆಂಟ್ ಕಮಿಟಿ ಸೋಮವಾರ ಆಯೋಜಿಸಿದ್ದ ಗೀತಾ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಭಗವದ್ಗೀತೆ ಭಗವಂತನಿಂದ ಉಕ್ತವಾದದ್ದು. ಅದನ್ನು ಓದಿ ಅರ್ಥೈಸಿಕೊಂಡರೆ ಸಾಕು. ಪ್ರತಿಯೊಬ್ಬರ ದ್ವಂದ್ವಗಳಿಗೆ ಪರಿಹಾರ ಇದರಲ್ಲಿದೆ. ಇಂದಿಗೂ ಶ್ರೀಕೃಷ್ಣ ಅತ್ಯುತ್ತಮ ಆಪ್ತ ಸಲಹೆಗಾರ ಎಂದರು.</p>.<p>ಇಂದಿನ ಜನಾಂಗ ಖಿನ್ನತೆ ಎಂದು ಮಾತ್ರೆೆಗಳನ್ನು ತೆಗೆದುಕೊಳ್ಳುವುದು, ಆತ್ಮಹತ್ಯೆೆಗೆ ಮುಂದಾಗುವುದನ್ನು ಕಾಣುತ್ತಿದ್ದೇವೆ. ಯಾವುದೇ ಕಾರಣಕ್ಕೂ ವಿಪರೀತ ಕ್ರಮಗಳಿಗೆ ಮುಂದಾಗದೆ ಭಗವದ್ಗೀತೆ ಪಠಣವನ್ನು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಜಿ. ಭೀಮೇಶ್ವರ ಜೋಶಿ ಮಾತನಾಡಿ, ‘ಭಗವದ್ಗೀತೆಯನ್ನು ಮನೆಯಲ್ಲಿ ಪೂಜೆಗೆ ಸೀಮಿತವಾಗಿರಿಸದೆ, ಪಠಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಃಖ ಮತ್ತು ಸಂತೋಷದಲ್ಲೂ ಭಗವದ್ಗೀತೆ ಬದುಕಿನ ಗೀತೆಯಾಗಬೇಕು’ ಎಂದು ಆಶಿಸಿದರು. </p>.<p>ನಿವೃತ್ತ ನ್ಯಾಯಮೂರ್ತಿ ಕೆ.ವಿ. ನರಸಿಂಹನ್, ಶೇಷಾದ್ರಿಪುರ ಶಿಕ್ಷಣ ಸಂಸ್ಥೆೆಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ಜ್ಯೋತಿಷಿ ಬಿ. ಎಸ್. ದ್ವಾರಕಾನಾಥ್, ಮಲ್ಲೇಶ್ವರ ಬ್ರಾಹ್ಮಣ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಪಾವಗಡ ಪ್ರಕಾಶ್ ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>