ನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ‘ಸ್ಮೈಲ್ ಟ್ರೈನ್ ಸೀಳು ತುಟಿ ಸಂಚಾರ ಘಟಕ’ಕ್ಕೆ ಚಾಲನೆ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಮೊಬೈಲ್ ವ್ಯಾನ್ ಪ್ರತಿ ವಾರ ತಾಲ್ಲೂಕು ಕೇಂದ್ರಗಳಿಗೆ ತೆರಳಲಿದ್ದು, ಉಚಿತವಾಗಿ ವಾಕ್ ಚಿಕಿತ್ಸೆ, ದಂತ ತಪಾಸಣೆ ಹಾಗೂ ಸಾಮಾನ್ಯ ಚಿಕಿತ್ಸೆಗಳನ್ನು ಒದಗಿಸಲಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದಲ್ಲಿ ಆಸ್ಪತ್ರೆಗೆ ಕರೆತರಲಾಗುತ್ತದೆ. ಶಸ್ತ್ರಚಿಕಿತ್ಸೆಯನ್ನೂ ಉಚಿತವಾಗಿ ಮಾಡಲಾಗುತ್ತದೆ.