ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಭದ್ರತೆಯಲ್ಲಿದ್ದ ಡಿಸಿಪಿ ಕಾಲಿನ ಮೇಲೆ ಕಾರು ಹರಿಸಿದ ಚಾಲಕ

Last Updated 27 ಸೆಪ್ಟೆಂಬರ್ 2021, 7:33 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ್ ಬಂದ್ ಭದ್ರತೆಯಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನ ಮೇಲೆ ಕಾರಿನ ಚಕ್ರ ಹರಿದಿದ್ದು, ಅವರು ಗಾಯಗೊಂಡಿದ್ದಾರೆ.

ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ ಸೇರಿದ್ದರು. ಸ್ಥಳಕ್ಕೆ ಬಂದ ಕಾರು ತಡೆಯಲು ಡಿಸಿಪಿ ಹಾಗೂ ಸಿಬ್ಬಂದಿ‌ ಮುಂದಾಗಿದ್ದರು. ಆದರೆ, ಚಾಲಕ ಕಾರು ನಿಲ್ಲಿಸಲಿಲ್ಲ.

ಎದುರುಗಿದ್ದ ಡಿಸಿಪಿ ಮೇಲೆಯೇ ಕಾರು ಹರಿಸಲು ಚಾಲಕ ಯತ್ನಿಸಿದ್ದ. ಡಿಸಿಪಿ ಪಕ್ಕಕ್ಕೆ ಸರಿಯುತ್ತಿದ್ದಂತೆ, ಅವರ ಎಡಗಾಲಿನ ಪಾದದ ಮೇಲೆಯೆ ಕಾರಿನ ಚಕ್ರ ಹರಿದು ಹೋಗಿದೆ.
ಗಾಯಗೊಂಡ ಡಿಸಿಪಿ ಸ್ಥಳದಲ್ಲೇ ಕುಳಿತು ಚೇತರಿಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು.

ಸಿಬ್ಬಂದಿ ಕಾರು ಜಪ್ತಿ‌ ಮಾಡಿ, ಚಾಲಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.
'ಡಿಸಿಪಿ ‌ಕಾಲಿನ ಪಾದಕ್ಕೆ ಪೆಟ್ಟಾಗಿದ್ದು. ಪ್ರಾಥಮಿಕ ‌ಚಿಕಿತ್ಸೆ ಪಡೆದು ಭದ್ರತೆ ಕೆಲಸ ಮುಂದುವರಿಸಿದ್ದಾರೆ' ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT