ಬೆಂಗಳೂರು: "ವಿವಿಧ ಸಂಘಟನೆಗಳು ಮಂಗಳವಾರ ಭಾರತಬಂದ್ಗೆ ಕರೆ ನೀಡಿರುವ ಕಾರಣ ವಕೀಲರು ಹಾಗೂ ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಪಕ್ಷದಲ್ಲಿ ಯಾವುದೇ ವಿರುದ್ಧ ಆದೇಶಗಳನ್ನು ನೀಡಬಾರದು" ಎಂದು ವಕೀಲರ ಸಂಘ ಮನವಿ ಮಾಡಿದೆ.
"ಈ ಮನವಿಯನ್ನು ಬೆಂಗಳೂರು ವ್ಯಾಪ್ತಿಯ ಎಲ್ಲ ನ್ಯಾಯಾಧೀಶರಿಗೆ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸಲ್ಲಿಸಲಾಗಿದೆ" ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಸಂಭವ ಇರುವುದರಿಂದ ಬೆಂಗಳೂರಿನ ಎಲ್ಲಾ ನ್ಯಾಯಾಲಯಗಳ ಮುಖ್ಯ ನ್ಯಾಯಾಧೀಶರುಗಳಿಗೆ ಈ ಮನವಿ ಮಾಡಿಕೊಳ್ಳಲಾಗಿದೆ" ಎಂದು ವಿವರಿಸಲಾಗಿದೆ.