ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಭಾರತ್‌ ಬಂದ್‌: ಸರ್ಕಾರಗಳ ವಿರುದ್ಧ ಶಾಂತಿಯುತ ಪ್ರತಿಭಟನೆ

ಕೆಂಪಾದ ಸ್ವಾತಂತ್ರ್ಯ ಉದ್ಯಾನ
Published : 9 ಜುಲೈ 2025, 14:34 IST
Last Updated : 9 ಜುಲೈ 2025, 14:34 IST
ಫಾಲೋ ಮಾಡಿ
Comments
ಕೃಷಿ ಜಮೀನು ಸ್ವಾಧೀನಕ್ಕೆ ವಿರೋಧ
ದೇವನಹಳ್ಳಿ ಸುತ್ತಮುತ್ತ 13 ಹಳ್ಳಿಗಳಲ್ಲಿ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಸಭೆಯಲ್ಲಿ ಖಂಡಿಸಲಾಯಿತು. ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ರೈತ ಮುಖಂಡರ ಮೇಲೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ದಬ್ಬಾಳಿಕೆ ನಡೆಸಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರಿಗೆ ಇಲ್ಲಿನ ಕೃಷಿಕರ ಹಿತಕ್ಕಿಂತ ಉದ್ದಿಮೆದಾರರ ಹಿತಾಸಕ್ತಿಯೇ ಮುಖ್ಯವಾಗಿದೆ’ ಎಂದು ಪ್ರತಿಭಟನಕಾರರು ಟೀಕಿಸಿದರು.
ಬಾರದ ಕಾರ್ಮಿಕ ಸಚಿವ
ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಲಿದ್ದಾರೆ ಎಂದು ಪ್ರತಿಭಟನಕಾರರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಸಚಿವರು ಬಾರದೇ ನಿರಾಸೆಗೊಳಿಸಿದರು. ‘ಸಚಿವರು ನಗರದಲ್ಲಿಯೇ ಇದ್ದಾರೆ. ಆದರೂ ಮನವಿ ಸ್ವೀಕರಿಸಲು ಬಾರದೇ ಕನಿಷ್ಠ ಸೌಜನ್ಯ ಕೂಡ ಇಲ್ಲ ಎಂಬುದನ್ನು ತೋರಿಸಿದ್ದಾರೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಇಲಾಖೆಯ ಆಯುಕ್ತ ಎಚ್‌.ಎನ್‌. ಗೋಪಾಲಕೃಷ್ಣ ಹೆಚ್ಚುವರಿ ಆಯುಕ್ತ ಉಮೇಶ್‌ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT