ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಿತ್ಯ ಎಷ್ಟು ದಿನ ನಡೆಯಬೇಕು, ಎಲ್ಲೆಲ್ಲಿಗೆ ಭೇಟಿ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲಿ 8 ಜಿಲ್ಲೆಗಳಲ್ಲಿ 21 ದಿನ ಪಾದಯಾತ್ರೆ ನಡೆಯಲಿದೆ. ಕೆಲವೆಡೆ ಅರಣ್ಯ ಪ್ರದೇಶ
ವಿದ್ದು, ಅಲ್ಲಿ ಪಾದಯಾತ್ರೆ ಬೇಕೇ ಎಂಬ ವಿಚಾರವಾಗಿ ಸ್ಥಳೀಯ ಪೊಲೀಸರ ಜತೆ ಚರ್ಚಿಸಿದ ಬಳಿಕ ದೆಹಲಿಯ ತಂಡ ತೀರ್ಮಾನಿಸಲಿದೆ’ ಎಂದರು.