ಬೆಂಗಳೂರು: ಮಂಗಳವಾರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ ಲಾಕ್ಡೌನ್ ಆಗುತ್ತಿದೆ. ಇದೇ ಸಮಯದಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸಿವಿಲ್ ಪೊಲೀಸ್ ವಾರ್ಡನ್ ಆಗಿ ಕೆಲಸ ಮಾಡಲು ಯುವಜನತೆಗೆ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ದೈಹಿಕವಾಗಿ ಸದೃಢವಾದ ಹಾಗೂ ಸೇವಾ ಮನೋಭಾವನೆಯುಳ್ಳ ಯುವಕ ಹಾಗೂ ಯುವತಿಯರಿಗೆ ಸಿವಿಲ್ ಪೊಲೀಸ್ ವಾರ್ಡನ್ ಆಗಲು ಮುಕ್ತ ಅವಕಾಶ ನೀಡಲಾಗುತ್ತಿದೆ’ ಎಂದಿದ್ದಾರೆ.
‘18ರಿಂದ 45 ವರ್ಷದೊಳಗಿನ ವ್ಯಕ್ತಿಗಳು ವಾರ್ಡನ್ ಆಗಲು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕೊರೊನಾ ವೈರಾಣು ವಿರುದ್ಧದ ಹೋರಾಟದಲ್ಲಿ ಸ್ಥಳೀಯ ಪೊಲೀಸ್ ಜೊತೆಯಲ್ಲಿ ಕೆಲಸ ಮಾಡಬೇಕು’ ಎಂದೂ ಅವರು ತಿಳಿಸಿದ್ದಾರೆ.
Inviting physically fit n service minded residents of Bengaluru, both men and women, between the age of 18 to 45 to Volunteer as Civil Police Warden to help the local police in regulation and enforcement of anti-Covid measures. To register log on to https://t.co/sPMdHigqYn