ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಭೀಮಾ ಕೊರೇಗಾಂವ್ ವಿಜಯೋತ್ಸವ 31ಕ್ಕೆ

Published 26 ಡಿಸೆಂಬರ್ 2023, 16:11 IST
Last Updated 26 ಡಿಸೆಂಬರ್ 2023, 16:11 IST
ಅಕ್ಷರ ಗಾತ್ರ

ಬೆಂಗಳೂರು: ಸಮತಾ ಸೈನಿಕ ದಳ (ಎಸ್‌ಎಸ್‌ಡಿ), ಭಾರತೀಯ ಬೌದ್ಧ ಮಹಾಸಭಾ ಹಾಗೂ ನಾಗಸೇನಾ ಬುದ್ಧ ವಿಹಾರ ಸಹಯೋಗದಲ್ಲಿ ಇದೇ 31ರಂದು ಭೀಮಾ ಕೊರೇಗಾಂವ್ ವಿಜಯೋತ್ಸವವನ್ನು ಸದಾಶಿವನಗರದಲ್ಲಿರುವ ನಾಗಸೇನ ವಿದ್ಯಾಲಯದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಸ್‌ಡಿ ರಾಜ್ಯ ಸಂಚಾಲಕ ಡಿ.ಎಂ. ಅಂಬರೀಶ್, ‘ಭೀಮಾ ಕೊರೇಗಾಂವ ಯುದ್ಧಕ್ಕೆ ಸಂಬಂಧಿಸಿದಂತೆ ಚರಿತ್ರೆಯ ಚಿಂತನೆಗಳು ಎಂಬ ನಾಲ್ಕು ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಚಿಂತಕರು ಈ ಗೋಷ್ಠಿಗಳನ್ನು ಭಾಗವಹಿಸಲಿದ್ದಾರೆ. ರಾಜ್ಯಸಭೆಯ ಸದಸ್ಯ ಎಲ್. ಹನುಮಂತಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.

‘ಸಂಜೆ 7 ರಿಂದ ರಾತ್ರಿ 12 ಗಂಟೆವರೆಗೆ ಹತ್ತು ಕಲಾತಂಡಗಳಿಂದ ಭೀಮಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ’ ಎಂದರು. 

ಜಾನಪದ ಸಾಹಿತಿ ಗೊಲ್ಲಹಳ್ಳಿ, ಬಾನಂದೂರು ಕೆಂಪಯ್ಯ, ಸುಬ್ಬುಹೊಲೆಯಾರ್ ಭಾಗವಹಿಸಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT