ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಎಸ್ಡಿ ರಾಜ್ಯ ಸಂಚಾಲಕ ಡಿ.ಎಂ. ಅಂಬರೀಶ್, ‘ಭೀಮಾ ಕೊರೇಗಾಂವ ಯುದ್ಧಕ್ಕೆ ಸಂಬಂಧಿಸಿದಂತೆ ಚರಿತ್ರೆಯ ಚಿಂತನೆಗಳು ಎಂಬ ನಾಲ್ಕು ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಚಿಂತಕರು ಈ ಗೋಷ್ಠಿಗಳನ್ನು ಭಾಗವಹಿಸಲಿದ್ದಾರೆ. ರಾಜ್ಯಸಭೆಯ ಸದಸ್ಯ ಎಲ್. ಹನುಮಂತಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.