ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ.ಶಿವರಾಜ್ ಮಾತನಾಡಿ, ‘ರಾಷ್ಟ್ರದ ಪ್ರಜಾಪ್ರಭುತ್ವ ಸಂಕಷ್ಟ ಸ್ಥಿತಿಯಲ್ಲಿದೆ. ಕೆಲ ಮೂಲಭೂತವಾದಿಗಳಿಂದ ಸಂವಿಧಾನಕ್ಕೆ ಸಂಚಕಾರ ಎದುರಾಗಿದ್ದು, ಅದನ್ನು ಸಮರ್ಥವಾಗಿ ಎದುರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕರ್ತವ್ಯ ನಿರ್ವಹಣೆಯಲ್ಲಿ ನಾವು ವಿಫಲರಾದರೆ ಕೋರೆಗಾಂವ್ ವಿಜಯೋತ್ಸವದಂತಹ ಆಚರಣೆಗೆ ಯಾವುದೇ ಮಾನ್ಯತೆ ದೊರಕುವುದಿಲ್ಲ’ ಎಂದರು.