<p><strong>ಕೆಂಗೇರಿ</strong>: ‘ಶೂದ್ರ ಸಮಾಜದ ಬೆಂಬಲವಿಲ್ಲದೆ ರಾಜಕೀಯವಾಗಿ ಯಾರೂ ಮೇಲುಗೈ ಸಾಧಿಸಲು ಆಗುವುದಿಲ್ಲ’ ಎಂದು ವಿಚಾರವಾದಿ ಡಾ.ಶಿವಕುಮಾರ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಭೀಮಾ– ಕೋರೆಗಾಂವ್ 202ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜದ ವಿವಿಧ ಸ್ತರಗಳಲ್ಲಿ ಶೂದ್ರ ಸಮಾಜ ಅಮೂಲ್ಯ ಸೇವೆ ಸಲ್ಲಿಸುತ್ತಿದೆ. ಮೇಲ್ವರ್ಗದ ಜನರು ಈ ವರ್ಗವನ್ನು ಬಳಸಿಕೊಂಡು ರಾಜಕೀಯವಾಗಿ ಪಾರಮ್ಯ ಸಾಧಿಸುತ್ತಿದ್ದಾರೆ. ಆ ವರ್ಗವನ್ನು ಸೆಳೆಯದ ಹೊರತು ಯಾರೊಬ್ಬರೂ ರಾಜಕೀಯವಾಗಿ ಸುಭದ್ರರಾಗುವುದು ಕಷ್ಟಸಾಧ್ಯ. ಈ ಸತ್ಯವನ್ನು ಅಸ್ಪೃಶ್ಯ ಸಮಾಜ ಅರಿಯಬೇಕಿದೆ’ ಎಂದರು.</p>.<p>‘ಅಸ್ಪೃಶ್ಯ ಸಮಾಜವು ನೀತಿ– ನಿಲುವುಗಳನ್ನು ಬದಲಿಸಿಕೊಳ್ಳುವ ಮೂಲಕ ಶೂದ್ರ ಸಮುದಾಯದ ಜತೆ ಸಮನ್ವಯ ಸಾಧಿಸಿದರೆ ರಾಜಕೀಯವಾಗಿಯೂ ಸೆಟೆದು ನಿಲ್ಲಬಹುದು’ ಎಂದು ಪ್ರೊ.ಶ್ರೀನಿವಾಸ್ ಹೇಳಿದರು.</p>.<p>ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ.ಶಿವರಾಜ್ ಮಾತನಾಡಿ, ‘ರಾಷ್ಟ್ರದ ಪ್ರಜಾಪ್ರಭುತ್ವ ಸಂಕಷ್ಟ ಸ್ಥಿತಿಯಲ್ಲಿದೆ. ಕೆಲ ಮೂಲಭೂತವಾದಿಗಳಿಂದ ಸಂವಿಧಾನಕ್ಕೆ ಸಂಚಕಾರ ಎದುರಾಗಿದ್ದು, ಅದನ್ನು ಸಮರ್ಥವಾಗಿ ಎದುರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕರ್ತವ್ಯ ನಿರ್ವಹಣೆಯಲ್ಲಿ ನಾವು ವಿಫಲರಾದರೆ ಕೋರೆಗಾಂವ್ ವಿಜಯೋತ್ಸವದಂತಹ ಆಚರಣೆಗೆ ಯಾವುದೇ ಮಾನ್ಯತೆ ದೊರಕುವುದಿಲ್ಲ’ ಎಂದರು.</p>.<p>ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p><strong>‘ಆತಂಕಕಾರಿ ಬೆಳವಣಿಗೆ’</strong><br />ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್, ‘ವಿಶ್ವವಿದ್ಯಾಲಯಗಳಲ್ಲಿ ಕಲಿಕೆಗೆ ಮೊದಲ ಪ್ರಾಶಸ್ತ್ಯ ದೊರೆಯಬೇಕು. ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಜನೆಗಿಂತ ಹೋರಾಟಗಳೇ ಹೆಚ್ಚಾಗಿ ಕಂಡು ಬರುತ್ತಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಂಬೇಡ್ಕರ್ ಚಿಂತನೆಗಳಿಗೆ ಪೂರಕವಾಗಿಲ್ಲ’ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಶೂದ್ರ ಸಮಾಜದ ಬೆಂಬಲವಿಲ್ಲದೆ ರಾಜಕೀಯವಾಗಿ ಯಾರೂ ಮೇಲುಗೈ ಸಾಧಿಸಲು ಆಗುವುದಿಲ್ಲ’ ಎಂದು ವಿಚಾರವಾದಿ ಡಾ.ಶಿವಕುಮಾರ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಭೀಮಾ– ಕೋರೆಗಾಂವ್ 202ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜದ ವಿವಿಧ ಸ್ತರಗಳಲ್ಲಿ ಶೂದ್ರ ಸಮಾಜ ಅಮೂಲ್ಯ ಸೇವೆ ಸಲ್ಲಿಸುತ್ತಿದೆ. ಮೇಲ್ವರ್ಗದ ಜನರು ಈ ವರ್ಗವನ್ನು ಬಳಸಿಕೊಂಡು ರಾಜಕೀಯವಾಗಿ ಪಾರಮ್ಯ ಸಾಧಿಸುತ್ತಿದ್ದಾರೆ. ಆ ವರ್ಗವನ್ನು ಸೆಳೆಯದ ಹೊರತು ಯಾರೊಬ್ಬರೂ ರಾಜಕೀಯವಾಗಿ ಸುಭದ್ರರಾಗುವುದು ಕಷ್ಟಸಾಧ್ಯ. ಈ ಸತ್ಯವನ್ನು ಅಸ್ಪೃಶ್ಯ ಸಮಾಜ ಅರಿಯಬೇಕಿದೆ’ ಎಂದರು.</p>.<p>‘ಅಸ್ಪೃಶ್ಯ ಸಮಾಜವು ನೀತಿ– ನಿಲುವುಗಳನ್ನು ಬದಲಿಸಿಕೊಳ್ಳುವ ಮೂಲಕ ಶೂದ್ರ ಸಮುದಾಯದ ಜತೆ ಸಮನ್ವಯ ಸಾಧಿಸಿದರೆ ರಾಜಕೀಯವಾಗಿಯೂ ಸೆಟೆದು ನಿಲ್ಲಬಹುದು’ ಎಂದು ಪ್ರೊ.ಶ್ರೀನಿವಾಸ್ ಹೇಳಿದರು.</p>.<p>ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ.ಶಿವರಾಜ್ ಮಾತನಾಡಿ, ‘ರಾಷ್ಟ್ರದ ಪ್ರಜಾಪ್ರಭುತ್ವ ಸಂಕಷ್ಟ ಸ್ಥಿತಿಯಲ್ಲಿದೆ. ಕೆಲ ಮೂಲಭೂತವಾದಿಗಳಿಂದ ಸಂವಿಧಾನಕ್ಕೆ ಸಂಚಕಾರ ಎದುರಾಗಿದ್ದು, ಅದನ್ನು ಸಮರ್ಥವಾಗಿ ಎದುರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕರ್ತವ್ಯ ನಿರ್ವಹಣೆಯಲ್ಲಿ ನಾವು ವಿಫಲರಾದರೆ ಕೋರೆಗಾಂವ್ ವಿಜಯೋತ್ಸವದಂತಹ ಆಚರಣೆಗೆ ಯಾವುದೇ ಮಾನ್ಯತೆ ದೊರಕುವುದಿಲ್ಲ’ ಎಂದರು.</p>.<p>ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p><strong>‘ಆತಂಕಕಾರಿ ಬೆಳವಣಿಗೆ’</strong><br />ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್, ‘ವಿಶ್ವವಿದ್ಯಾಲಯಗಳಲ್ಲಿ ಕಲಿಕೆಗೆ ಮೊದಲ ಪ್ರಾಶಸ್ತ್ಯ ದೊರೆಯಬೇಕು. ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಜನೆಗಿಂತ ಹೋರಾಟಗಳೇ ಹೆಚ್ಚಾಗಿ ಕಂಡು ಬರುತ್ತಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಂಬೇಡ್ಕರ್ ಚಿಂತನೆಗಳಿಗೆ ಪೂರಕವಾಗಿಲ್ಲ’ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>