<p><strong>ಬೆಂಗಳೂರು</strong>: ಭೂಮಿ, ಡಿಜಿಟಲ್ ಕೃಷಿ ವೇದಿಕೆ ನೀಡುವ 2025ನೇ ಸಾಲಿನ ‘ಭೂಮಿ ರೈತ ಪ್ರಶಸ್ತಿ’ಯನ್ನು 120ಕ್ಕೂ ಅಧಿಕ ರೈತರಿಗೆ ಫೆ.28ರಂದು (ಶನಿವಾರ) ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. </p>.<p>‘ಇದೇ ಸಮಾರಂಭದಲ್ಲಿ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಇರುವ ಅವಕಾಶಗಳ ಕುರಿತು ಮಾಹಿತಿ ನೀಡಲು ರೈತ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪಿಎಂಎಫ್ಎಂಇ ಯೋಜನೆಯ ವಿವರಗಳನ್ನು ಕೃಷಿಕರಿಗೆ ನೀಡಲಾಗುತ್ತದೆ’ ಎಂದು ವೇದಿಕೆಯ ಮಾಧ್ಯಮ ಸಲಹೆಗಾರ ಹನುಮೇಶ್ ಕೆ. ಯಾವಗಲ್ ತಿಳಿಸಿದ್ದಾರೆ.</p>.<p>‘ನಗರ ಪ್ರದೇಶದ ಜನರು ಗ್ರಾಮೀಣ ಭಾಗದ ರೈತರಿಗೆ ನೈತಿಕ ಸ್ಥೈರ್ಯ ತುಂಬುವ ಹಾಗೂ ಅನ್ನದಾತನ ಜೊತೆಗೆ ಸದಾ ನಿಲ್ಲುವ ಉದ್ದೇಶದಿಂದ ಐ ಸಪೋರ್ಟ್ ಫಾರ್ಮರ್ ಎಂಬ ವಿಶಿಷ್ಟ ಯೋಜನೆಯನ್ನು ಭೂಮಿ, ಕೃಷಿ ಡಿಜಿಟಲ್ ವೇದಿಕೆ ವತಿಯಿಂದ ಆರಂಭಿಸಲಾಗುತ್ತಿದೆ’ ಎಂದು ವಿವರಿಸಿದ್ದಾರೆ.</p>.<p>‘ಅನ್ನದಾತನೇ ಸೆಲೆಬ್ರಿಟಿ’ ಎಂದು ಸಮಾಜಕ್ಕೆ ಸಾರಿ ಹೇಳುವ ಮೂಲಕ ಯುವ ಜನಾಂಗಕ್ಕೆ ಕೃಷಿ ಕ್ಷೇತ್ರದ ಮಹತ್ವ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ. ಪುತ್ರ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ (ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭೂಮಿ, ಡಿಜಿಟಲ್ ಕೃಷಿ ವೇದಿಕೆ ನೀಡುವ 2025ನೇ ಸಾಲಿನ ‘ಭೂಮಿ ರೈತ ಪ್ರಶಸ್ತಿ’ಯನ್ನು 120ಕ್ಕೂ ಅಧಿಕ ರೈತರಿಗೆ ಫೆ.28ರಂದು (ಶನಿವಾರ) ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. </p>.<p>‘ಇದೇ ಸಮಾರಂಭದಲ್ಲಿ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಇರುವ ಅವಕಾಶಗಳ ಕುರಿತು ಮಾಹಿತಿ ನೀಡಲು ರೈತ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪಿಎಂಎಫ್ಎಂಇ ಯೋಜನೆಯ ವಿವರಗಳನ್ನು ಕೃಷಿಕರಿಗೆ ನೀಡಲಾಗುತ್ತದೆ’ ಎಂದು ವೇದಿಕೆಯ ಮಾಧ್ಯಮ ಸಲಹೆಗಾರ ಹನುಮೇಶ್ ಕೆ. ಯಾವಗಲ್ ತಿಳಿಸಿದ್ದಾರೆ.</p>.<p>‘ನಗರ ಪ್ರದೇಶದ ಜನರು ಗ್ರಾಮೀಣ ಭಾಗದ ರೈತರಿಗೆ ನೈತಿಕ ಸ್ಥೈರ್ಯ ತುಂಬುವ ಹಾಗೂ ಅನ್ನದಾತನ ಜೊತೆಗೆ ಸದಾ ನಿಲ್ಲುವ ಉದ್ದೇಶದಿಂದ ಐ ಸಪೋರ್ಟ್ ಫಾರ್ಮರ್ ಎಂಬ ವಿಶಿಷ್ಟ ಯೋಜನೆಯನ್ನು ಭೂಮಿ, ಕೃಷಿ ಡಿಜಿಟಲ್ ವೇದಿಕೆ ವತಿಯಿಂದ ಆರಂಭಿಸಲಾಗುತ್ತಿದೆ’ ಎಂದು ವಿವರಿಸಿದ್ದಾರೆ.</p>.<p>‘ಅನ್ನದಾತನೇ ಸೆಲೆಬ್ರಿಟಿ’ ಎಂದು ಸಮಾಜಕ್ಕೆ ಸಾರಿ ಹೇಳುವ ಮೂಲಕ ಯುವ ಜನಾಂಗಕ್ಕೆ ಕೃಷಿ ಕ್ಷೇತ್ರದ ಮಹತ್ವ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ. ಪುತ್ರ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ (ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>