<p><strong>ಬೆಂಗಳೂರು:</strong> ‘ಮಳೆನೀರು ಸಂಗ್ರಹ ವಿಧಾನ ಅಳವಡಿಕೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವ ಜತೆಗೆ ಅಂತರ್ಜಲದ ಮಟ್ಟವು ಹೆಚ್ಚಲಿದೆ’ ಎಂದು ಸಂಶೋಧಕ ಬಿಪ್ಲಬ್ ಕೇತನ್ ಪಾಲ್ ತಿಳಿಸಿದರು.</p>.<p>ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಗರದಲ್ಲಿ ಆಯೋಜಿಸಿದ ‘ಭುಂಗ್ರೂ ನೀರು ಕೊಯ್ಲು ತಂತ್ರಗಾರಿಕೆ’ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ‘ಗುಜರಾತ್ನಲ್ಲಿ ಪರಿಚಯಿಸಲಾಗಿರುವ ಭುಂಗ್ರೂ ಪದ್ಧತಿಯು ನೀರಿನ ಸಮಸ್ಯೆಯನ್ನು ನಿವಾರಿಸಲು ಸಹಕಾರಿಯಾಗಿದೆ. ಈ ಪದ್ಧತಿಯನ್ನು ಕರ್ನಾಟಕದಲ್ಲಿ ಕೂಡ ಅಳವಡಿಸುವ ಕೆಲಸವಾಗಬೇಕು. ಹರಿದು ಹೋಗುವ ಮಳೆ ನೀರನ್ನು ಭೂಗರ್ಭದಲ್ಲಿ ಸಂಗ್ರಹಿಸುವ ಕೆಲಸವಾಗಬೇಕು. ಆಗ ನೀರಿನ ಸದ್ಭಳಕೆ ಸಾಧ್ಯವಾಗುತ್ತದೆ’ ಎಂದು ವಿವರಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಭೂಗೋಳ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಡಿ. ಹಂಜಗಿ ಮಾತನಾಡಿ, ‘ಹವಾಮಾನ ಬದಲಾವಣೆಯಿಂದ ಗಂಭೀರ ಅಪಾಯಗಳನ್ನು ಎದುರಿಸುತ್ತಿದ್ದೇವೆ. ನಿಸರ್ಗ ಕೇಂದ್ರಿತವಾದ ಬದುಕನ್ನು ಕಟ್ಟಿಕೊಳ್ಳುವುದು ಅನಿವಾರ್ಯ. ಭವಿಷ್ಯದ ಜನಾಂಗವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ’ ಎಂದರು.</p>.<p>ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ‘ಸುಸ್ಥಿರ ಅಭಿವೃದ್ಧಿಯಿಂದ ಮಾತ್ರ ಈ ನಿಸರ್ಗದಲ್ಲಿರುವ ಜನವನ್ನು ಕಾಪಾಡಲು ಸಾಧ್ಯ. ಇಲ್ಲದಿದ್ದಲ್ಲಿ ನೀರಿಗಾಗಿ ಮಹಾಯುದ್ಧಗಳು ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಳೆ ನೀರನ್ನು ಸಂಗ್ರಹಿಸಲು ಮುಂದಾಗದಿದ್ದಲ್ಲಿ ಅಪಾಯವನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಳೆನೀರು ಸಂಗ್ರಹ ವಿಧಾನ ಅಳವಡಿಕೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವ ಜತೆಗೆ ಅಂತರ್ಜಲದ ಮಟ್ಟವು ಹೆಚ್ಚಲಿದೆ’ ಎಂದು ಸಂಶೋಧಕ ಬಿಪ್ಲಬ್ ಕೇತನ್ ಪಾಲ್ ತಿಳಿಸಿದರು.</p>.<p>ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಗರದಲ್ಲಿ ಆಯೋಜಿಸಿದ ‘ಭುಂಗ್ರೂ ನೀರು ಕೊಯ್ಲು ತಂತ್ರಗಾರಿಕೆ’ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ‘ಗುಜರಾತ್ನಲ್ಲಿ ಪರಿಚಯಿಸಲಾಗಿರುವ ಭುಂಗ್ರೂ ಪದ್ಧತಿಯು ನೀರಿನ ಸಮಸ್ಯೆಯನ್ನು ನಿವಾರಿಸಲು ಸಹಕಾರಿಯಾಗಿದೆ. ಈ ಪದ್ಧತಿಯನ್ನು ಕರ್ನಾಟಕದಲ್ಲಿ ಕೂಡ ಅಳವಡಿಸುವ ಕೆಲಸವಾಗಬೇಕು. ಹರಿದು ಹೋಗುವ ಮಳೆ ನೀರನ್ನು ಭೂಗರ್ಭದಲ್ಲಿ ಸಂಗ್ರಹಿಸುವ ಕೆಲಸವಾಗಬೇಕು. ಆಗ ನೀರಿನ ಸದ್ಭಳಕೆ ಸಾಧ್ಯವಾಗುತ್ತದೆ’ ಎಂದು ವಿವರಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಭೂಗೋಳ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಡಿ. ಹಂಜಗಿ ಮಾತನಾಡಿ, ‘ಹವಾಮಾನ ಬದಲಾವಣೆಯಿಂದ ಗಂಭೀರ ಅಪಾಯಗಳನ್ನು ಎದುರಿಸುತ್ತಿದ್ದೇವೆ. ನಿಸರ್ಗ ಕೇಂದ್ರಿತವಾದ ಬದುಕನ್ನು ಕಟ್ಟಿಕೊಳ್ಳುವುದು ಅನಿವಾರ್ಯ. ಭವಿಷ್ಯದ ಜನಾಂಗವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ’ ಎಂದರು.</p>.<p>ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ‘ಸುಸ್ಥಿರ ಅಭಿವೃದ್ಧಿಯಿಂದ ಮಾತ್ರ ಈ ನಿಸರ್ಗದಲ್ಲಿರುವ ಜನವನ್ನು ಕಾಪಾಡಲು ಸಾಧ್ಯ. ಇಲ್ಲದಿದ್ದಲ್ಲಿ ನೀರಿಗಾಗಿ ಮಹಾಯುದ್ಧಗಳು ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಳೆ ನೀರನ್ನು ಸಂಗ್ರಹಿಸಲು ಮುಂದಾಗದಿದ್ದಲ್ಲಿ ಅಪಾಯವನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>