<p><strong>ರಾಮನಗರ/ಬಿಡದಿ: </strong>ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಹೊಸತಾಗಿ ನಿರ್ಮಿಸಲಾಗಿರುವ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮ ನಗರ–ಚನ್ನಪಟ್ಟಣ ಬೈಪಾಸ್ ಇದೇ 30ರಿಂದ ಸಂಚಾರಕ್ಕೆ ಲಭ್ಯವಾಗುವ ನಿರೀಕ್ಷೆ ಇದೆ.</p>.<p>ಈ ಕುರಿತು ಸಂಸದ ಪ್ರತಾಪ ಸಿಂಹ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಬೈಪಾಸ್ನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು. ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನೂ ಮುಕ್ತಗೊಳಿಸಲಾಗುತ್ತಿದೆ. ರಾಮನಗರ– ಚನ್ನಪಟ್ಟಣ ಬೈಪಾಸ್ನ 23 ಕಿ.ಮೀ. ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವೂ ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿವೆ. ಸರ್ವೀಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ತಿಳಿಸಿದ್ದಾರೆ.</p>.<p>‘ದಸರಾ ಒಳಗೆ ಈ ಹೆದ್ದಾರಿಯನ್ನು ಉದ್ಘಾಟಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಇನ್ನೂ ನಮಗೆ ಅವಕಾಶ ಇದ್ದು, ಪ್ರಯತ್ನ ನಡೆಸಲಿದ್ದೇವೆ. ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ಬೈಪಾಸ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಇರುವ ಅಡೆತಡೆ ನಿವಾರಿಸುವ ಪ್ರಯತ್ನ ನಡೆದಿದೆ’ ಎಂದು<br />ವಿವರಿಸಿದ್ದಾರೆ.</p>.<p>‘ಪ್ರತಿನಿತ್ಯವೂ ವಾಹನ ಸಂಚಾರ ದಟ್ಟಣೆ ಹೆಚ್ಚುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಆಗುತ್ತಿರಲಿಲ್ಲ. ದಶಪಥ ನಿರ್ಮಿಸುತ್ತಿರುವುದು ಸಹಕಾರಿಯಾಗಿದೆ. ಚನ್ನಪಟ್ಟಣದವರೆಗೆ ಎರಡು ಕಡೆಯಿಂದ ಸಂಚರಿಸಲು ಅವಕಾಶ ಮಾಡಿಕೊಟ್ಟರೆ ಅನುಕೂಲವಾಗಲಿದೆ. ನಾಡಹಬ್ಬ ದಸರಾದೊಳಗೆ ಎರಡು ಕಡೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಹೆದ್ದಾರಿ ಪ್ರಾಧಿಕಾರ ಕ್ರಮವಹಿಸಬೇಕು’ ಎಂದು ಮದ್ದೂರು ಗ್ರಾಮದ ನರಸಿಂಹಯ್ಯ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ/ಬಿಡದಿ: </strong>ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಹೊಸತಾಗಿ ನಿರ್ಮಿಸಲಾಗಿರುವ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮ ನಗರ–ಚನ್ನಪಟ್ಟಣ ಬೈಪಾಸ್ ಇದೇ 30ರಿಂದ ಸಂಚಾರಕ್ಕೆ ಲಭ್ಯವಾಗುವ ನಿರೀಕ್ಷೆ ಇದೆ.</p>.<p>ಈ ಕುರಿತು ಸಂಸದ ಪ್ರತಾಪ ಸಿಂಹ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಬೈಪಾಸ್ನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು. ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನೂ ಮುಕ್ತಗೊಳಿಸಲಾಗುತ್ತಿದೆ. ರಾಮನಗರ– ಚನ್ನಪಟ್ಟಣ ಬೈಪಾಸ್ನ 23 ಕಿ.ಮೀ. ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವೂ ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿವೆ. ಸರ್ವೀಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ತಿಳಿಸಿದ್ದಾರೆ.</p>.<p>‘ದಸರಾ ಒಳಗೆ ಈ ಹೆದ್ದಾರಿಯನ್ನು ಉದ್ಘಾಟಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಇನ್ನೂ ನಮಗೆ ಅವಕಾಶ ಇದ್ದು, ಪ್ರಯತ್ನ ನಡೆಸಲಿದ್ದೇವೆ. ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ಬೈಪಾಸ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಇರುವ ಅಡೆತಡೆ ನಿವಾರಿಸುವ ಪ್ರಯತ್ನ ನಡೆದಿದೆ’ ಎಂದು<br />ವಿವರಿಸಿದ್ದಾರೆ.</p>.<p>‘ಪ್ರತಿನಿತ್ಯವೂ ವಾಹನ ಸಂಚಾರ ದಟ್ಟಣೆ ಹೆಚ್ಚುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಆಗುತ್ತಿರಲಿಲ್ಲ. ದಶಪಥ ನಿರ್ಮಿಸುತ್ತಿರುವುದು ಸಹಕಾರಿಯಾಗಿದೆ. ಚನ್ನಪಟ್ಟಣದವರೆಗೆ ಎರಡು ಕಡೆಯಿಂದ ಸಂಚರಿಸಲು ಅವಕಾಶ ಮಾಡಿಕೊಟ್ಟರೆ ಅನುಕೂಲವಾಗಲಿದೆ. ನಾಡಹಬ್ಬ ದಸರಾದೊಳಗೆ ಎರಡು ಕಡೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಹೆದ್ದಾರಿ ಪ್ರಾಧಿಕಾರ ಕ್ರಮವಹಿಸಬೇಕು’ ಎಂದು ಮದ್ದೂರು ಗ್ರಾಮದ ನರಸಿಂಹಯ್ಯ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>