<p><strong>ಬೆಂಗಳೂರು: </strong>ಬೆ೦ಗಳೂರು ಅ೦ತರರ್ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಬಿಬಿಎಂಪಿ ವತಿಯಿಂದ ಆರಂಭಿಸಿದ್ದ ಕೋವಿಡ್ ಆರೈಕೆ ಕೇಂದ್ರವನ್ನು ಇದೇ 15ರಿಂದ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.</p>.<p>ಈ ಆರೈಕೆ ಕೇಂದ್ರಗಳಲ್ಲಿರುವ ಕೋವಿಡ್ ಸೋಂಕಿತರನ್ನು ಸಮೀಪದಲ್ಲಿರುವ ಬೇರೆ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲು ಆಯುಕ್ತರು ಸೂಚಿಸಿದ್ದಾರೆ.</p>.<p>ಈ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರು ದಾಖಲಾಗುತ್ತಿಲ್ಲ. ಹಾಗಾಗಿ ಇದನ್ನು ಮುಚ್ಚಬಹುದು ಎಂದು ಕೋವಿಡ್ ಆರೈಕೆ ಕೇಂದ್ರಗಳ ಕಾರ್ಯಪಡೆಯ ಮುಖ್ಯಸ್ಥರು ಸಲಹೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆ.31ರಂದು ನಡೆದ ಸಭೆಯಲ್ಲಿ ಈ ಆರೈಕೆ ಕೇಂದ್ರವನ್ನು ಮುಚ್ಚಲು ತೀರ್ಮಾನಿಸಲಾಗಿತ್ತು.</p>.<p>ಈ ಕೇಂದ್ರದಲ್ಲಿ ಬಿಬಿಎಂಪಿ ವತಿಯಿಂದ ಖರೀದಿಸಲಾದ ಉಕ್ಕಿನ ಮಂಚಗಳು, ಹಾಸಿಗೆಗಳು, ಫ್ಯಾನ್ಗಳು ಕಸದ ಬುಟ್ಟಿಗಳು, ಬಕೆಟ್ಗಳು, ಮಗ್ಗಳು, ಕುಡಿಯುವ ನೀರು ಪೂರೈಸುವ ಪರಿಕರಗಳು ಹಾಗೂ ಇತರ ಪೀಠೋಪಕರಣಗಳನ್ನು ಸರ್ಕಾರಿ ಹಾಸ್ಟೆಲ್ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಉಚಿತವಾಗಿ ನೀಡಲು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. </p>.<p>ಬಾಗಲಕೋಟೆಯಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಿಗೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಹಾಗೂ ಜಿಕೆವಿಕೆಗೆ ತಲಾ 1 ಸಾವಿರ ಪೀಠೋಪಕರಣಗಳು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ 2,500 ಪೀಠೋಪಕರಣಗಳನ್ನು ಹಸ್ತಾಂತರಿಸಬೇಕು. ಉಳಿದ ಪೀಠೋಪಕರಣಗಳನ್ನು ಸರ್ಕಾರದ ಆಸ್ಪತ್ರೆಗಳಿಂದ ಹಾಗೂ ಹಾಸ್ಟೆಲ್ಗಳಿಂದ ಬರುವ ಕೋರಿಕೆಗಳ ಆಧಾರದಲ್ಲಿ ಹಸ್ತಾಂತರಿಸಬೇಕು ಎಂದು ಆಯುಕ್ತರು ಈ ಆರೈಕೆ ಕೇಂದ್ರದ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ರೋಗ ಲಕ್ಷಣ ಇಲ್ಲದ 10 ಸಾವಿರ ಕೋವಿಡ್ ಸೋಂಕಿತರಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಆರೈಕೆ ಕೇಂದ್ರವನ್ನು ಆರಂಭಿಸಲಾಗಿತ್ತು. ಇಲ್ಲಿ 6 ಸಾವಿರ ಹಾಸಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅದರಲ್ಲಿ 1,500 ಹಾಸಿಗೆಗಳನ್ನು ತಿಂಗಳ ಹಿಂದೆ ಉದ್ಘಾಟಿಸಲಾಗಿತ್ತು. 1,500 ಹಾಸಿಗೆಗಳನ್ನು ಇಲ್ಲಿ ಚಿಕಿತ್ಸೆ ನೀಡುವ ವೈದ್ಯರು ಮತ್ತು ಶೂಶ್ರೂಷಕರ ಪ್ರತ್ಯೇಕ ವಾಸಕ್ಕಾಗಿ ಕಾಯ್ದಿರಿಸಲಾಗಿತ್ತು. ಇತ್ತೀಚೆಗೆ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಆಸಕ್ತಿ ತೋರಿಸುತ್ತಿದ್ದಾರೆ. ಹಾಗಾಗಿ ಈ ಕೇಂದ್ರದ 1,500 ಹಾಸಿಗೆಗಳೂ ಭರ್ತಿ ಆಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆ೦ಗಳೂರು ಅ೦ತರರ್ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಬಿಬಿಎಂಪಿ ವತಿಯಿಂದ ಆರಂಭಿಸಿದ್ದ ಕೋವಿಡ್ ಆರೈಕೆ ಕೇಂದ್ರವನ್ನು ಇದೇ 15ರಿಂದ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.</p>.<p>ಈ ಆರೈಕೆ ಕೇಂದ್ರಗಳಲ್ಲಿರುವ ಕೋವಿಡ್ ಸೋಂಕಿತರನ್ನು ಸಮೀಪದಲ್ಲಿರುವ ಬೇರೆ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲು ಆಯುಕ್ತರು ಸೂಚಿಸಿದ್ದಾರೆ.</p>.<p>ಈ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರು ದಾಖಲಾಗುತ್ತಿಲ್ಲ. ಹಾಗಾಗಿ ಇದನ್ನು ಮುಚ್ಚಬಹುದು ಎಂದು ಕೋವಿಡ್ ಆರೈಕೆ ಕೇಂದ್ರಗಳ ಕಾರ್ಯಪಡೆಯ ಮುಖ್ಯಸ್ಥರು ಸಲಹೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆ.31ರಂದು ನಡೆದ ಸಭೆಯಲ್ಲಿ ಈ ಆರೈಕೆ ಕೇಂದ್ರವನ್ನು ಮುಚ್ಚಲು ತೀರ್ಮಾನಿಸಲಾಗಿತ್ತು.</p>.<p>ಈ ಕೇಂದ್ರದಲ್ಲಿ ಬಿಬಿಎಂಪಿ ವತಿಯಿಂದ ಖರೀದಿಸಲಾದ ಉಕ್ಕಿನ ಮಂಚಗಳು, ಹಾಸಿಗೆಗಳು, ಫ್ಯಾನ್ಗಳು ಕಸದ ಬುಟ್ಟಿಗಳು, ಬಕೆಟ್ಗಳು, ಮಗ್ಗಳು, ಕುಡಿಯುವ ನೀರು ಪೂರೈಸುವ ಪರಿಕರಗಳು ಹಾಗೂ ಇತರ ಪೀಠೋಪಕರಣಗಳನ್ನು ಸರ್ಕಾರಿ ಹಾಸ್ಟೆಲ್ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಉಚಿತವಾಗಿ ನೀಡಲು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. </p>.<p>ಬಾಗಲಕೋಟೆಯಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಿಗೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಹಾಗೂ ಜಿಕೆವಿಕೆಗೆ ತಲಾ 1 ಸಾವಿರ ಪೀಠೋಪಕರಣಗಳು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ 2,500 ಪೀಠೋಪಕರಣಗಳನ್ನು ಹಸ್ತಾಂತರಿಸಬೇಕು. ಉಳಿದ ಪೀಠೋಪಕರಣಗಳನ್ನು ಸರ್ಕಾರದ ಆಸ್ಪತ್ರೆಗಳಿಂದ ಹಾಗೂ ಹಾಸ್ಟೆಲ್ಗಳಿಂದ ಬರುವ ಕೋರಿಕೆಗಳ ಆಧಾರದಲ್ಲಿ ಹಸ್ತಾಂತರಿಸಬೇಕು ಎಂದು ಆಯುಕ್ತರು ಈ ಆರೈಕೆ ಕೇಂದ್ರದ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ರೋಗ ಲಕ್ಷಣ ಇಲ್ಲದ 10 ಸಾವಿರ ಕೋವಿಡ್ ಸೋಂಕಿತರಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಆರೈಕೆ ಕೇಂದ್ರವನ್ನು ಆರಂಭಿಸಲಾಗಿತ್ತು. ಇಲ್ಲಿ 6 ಸಾವಿರ ಹಾಸಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅದರಲ್ಲಿ 1,500 ಹಾಸಿಗೆಗಳನ್ನು ತಿಂಗಳ ಹಿಂದೆ ಉದ್ಘಾಟಿಸಲಾಗಿತ್ತು. 1,500 ಹಾಸಿಗೆಗಳನ್ನು ಇಲ್ಲಿ ಚಿಕಿತ್ಸೆ ನೀಡುವ ವೈದ್ಯರು ಮತ್ತು ಶೂಶ್ರೂಷಕರ ಪ್ರತ್ಯೇಕ ವಾಸಕ್ಕಾಗಿ ಕಾಯ್ದಿರಿಸಲಾಗಿತ್ತು. ಇತ್ತೀಚೆಗೆ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಆಸಕ್ತಿ ತೋರಿಸುತ್ತಿದ್ದಾರೆ. ಹಾಗಾಗಿ ಈ ಕೇಂದ್ರದ 1,500 ಹಾಸಿಗೆಗಳೂ ಭರ್ತಿ ಆಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>