<p><strong>ಬೆಂಗಳೂರು: </strong>ಬೆ೦ಗಳೂರು ಅ೦ತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ (ಬಿಐಇಸಿ) ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಗೊಂಡ 50 ದಿನಗಳಲ್ಲೇ ಮುಚ್ಚಲಾಗಿದೆ. ನಗರದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದ ಕಾರಣಕ್ಕೆ ಈ ಕೇಂದ್ರವನ್ನು ಮುಚ್ಚಿದ್ದಲ್ಲ! ಇಲ್ಲಿ ಆರೈಕೆಗೆ ಒಳಗಾಗಲು ಕೋವಿಡ್ ಸಂತ್ರಸ್ತರೇ ಮುಂದೆ ಬರುತ್ತಿಲ್ಲ. </p>.<p>ರೋಗ ಲಕ್ಷಣ ಇಲ್ಲದ ಕೋವಿಡ್ ಸೋಂಕಿತರ ಆರೈಕೆ ಸಲುವಾಗಿ ಈ ಕೇಂದ್ರವನ್ನು ಸರ್ಕಾರ ಆರಂಭಿಸಿತ್ತು. ಇಲ್ಲಿ 1,100 ಹಾಸಿಗೆ ವ್ಯವಸ್ಥೆ ಕಲ್ಪಿಸಲಿದ್ದು, ಇದು ದೇಶದ ಅತಿದೊಡ್ಡ ಆರೈಕೆ ಕೇಂದ್ರವಾಗಲಿದೆ ಎಂದು ಸರ್ಕಾರ ಹೇಳಿಕೊಂಡಿತ್ತು. ಆದರೆ, ಇಲ್ಲಿ ಅಳವಡಿಸಿದ್ದು 6,500 ಹಾಸಿಗೆಗಳನ್ನು ಮಾತ್ರ. ಈ ಕೇಂದ್ರವನ್ನು ಜುಲೈ 27ರಂದು ಉದ್ಘಾಟಿಸಲಾಗಿತ್ತು. 1500 ಹಾಸಿಗೆಗಳನ್ನು ಕೋವಿಡ್ ಸಂತ್ರಸ್ತರಿಗೆ ಹಾಗೂ 1,500 ಹಾಸಿಗೆಗಳನ್ನು ವೈದ್ಯರು ಮತ್ತು ಶೂಶ್ರೂಷಕರ ಪ್ರತ್ಯೇಕ ವಾಸಕ್ಕಾಗಿ ಕಾಯ್ದಿರಿಸಲಾಗಿತ್ತು. ಇತ್ತೀಚೆಗೆ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಆಸಕ್ತಿ ತೋರಿಸುತ್ತಿರುವುದರಿಂದ ಈ ಕೇಂದ್ರದ ಹಾಸಿಗೆಗಳು ಒಮ್ಮೆಯೂ ಭರ್ತಿ ಆಗಿರಲಿಲ್ಲ.</p>.<p>ಈ ಆರೈಕೆ ಕೇಂದ್ರವು ದೇಶದ ಅತಿ ದೊಡ್ಡ ಆರೈಕೆ ಕೇಂದ್ರ ಎಂಬ ಕಾರಣಕ್ಕೆ ಸುದ್ದಿಯಾಗಿದ್ದಕ್ಕಿಂತಲೂ ದುಬಾರಿ ವೆಚ್ಚದ ಕಾರಣಕ್ಕೆ ಸುದ್ದಿಯಾಗಿದ್ದೇ ಹೆಚ್ಚು. ಇಲ್ಲಿ ಅಳವಡಿಸುವ ಮಂಚ ಹಾಗೂ ಇತರ ಪರಿಕರಗಳಿಗೆ ದಿನಕ್ಕೆ ₹ 800 ಬಾಡಿಗೆ ನೀಡುವ ಪ್ರಸ್ತಾಪಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಈ ಪ್ರಸ್ತಾವ ಕೈಬಿಟ್ಟ ಸರ್ಕಾರ ಮಂಚ, ಹಾಸಿಗೆ ಸೇರಿದಂತೆ ಕೆಲವು ಪರಿಕರಗಳನ್ನು ಖರೀದಿಸಿ, ಕೆಲವನ್ನಷ್ಟೇ ಬಾಡಿಗೆಗೆ ಪಡೆಯಿತು.</p>.<p>‘ಬಿಐಇಸಿ ಕೋವಿಡ್ ಆರೈಕೆ ಕೇಂದ್ರವನ್ನು ಮಂಗಳವಾರರಿಂದ ಸ್ಥಗಿತಗೊಳಿಸಿದ್ದೇವೆ. ಇಲ್ಲಿ ಈಗ ಕೋವಿಡ್ ಸಂತ್ರಸ್ತರು ಯಾರೂ ಆರೈಕೆಗೆ ಒಳಗಾಗುತ್ತಿಲ್ಲ. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಸಮೀಪದ ಇತರ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕೇಂದ್ರದ ಉಕ್ಕಿನ ಮಂಚಗಳು, ಹಾಸಿಗೆಗಳು, ಫ್ಯಾನ್ಗಳು ಕಸದ ಬುಟ್ಟಿಗಳು, ಬಕೆಟ್ಗಳು, ಮಗ್ಗಳು, ನೀರು ಪೂರೈಸುವ ಪರಿಕರಗಳು ಹಾಗೂ ಇತರ ಪೀಠೋಪಕರಣಗಳನ್ನು ಸರ್ಕಾರಿ ಹಾಸ್ಟೆಲ್ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಉಚಿತವಾಗಿ ನೀಡುತ್ತಿದೆ.</p>.<p>ಬಾಗಲ ಕೋಟೆಯಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಿಗೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಹಾಗೂ ಜಿಕೆವಿಕೆಯ ಹಾಸ್ಟೆಲ್ಗೆ ತಲಾ 1 ಸಾವಿರ ಪೀಠೋಪಕರಣಗಳು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ 2,500 ಪೀಠೋಪಕರಣಗಳನ್ನು ಹಸ್ತಾಂತರಿಸಬೇಕು. ಉಳಿದ ಪೀಠೋಪಕರಣಗಳನ್ನು ಸರ್ಕಾರದ ಆಸ್ಪತ್ರೆಗಳಿಂದ ಹಾಗೂ ಹಾಸ್ಟೆಲ್ಗಳಿಂದ ಬರುವ ಕೋರಿಕೆಗಳ ಆಧಾರದಲ್ಲಿ ಹಸ್ತಾಂತರಿಸಲಾಗುತ್ತಿದೆ ಎಂದರು.</p>.<p>‘ಈ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರು ದಾಖಲಾಗುತ್ತಿಲ್ಲ. ಹಾಗಾಗಿ ಇದನ್ನು ಮುಚ್ಚಬಹುದು’ ಎಂದು ಕೋವಿಡ್ ಆರೈಕೆ ಕೇಂದ್ರಗಳ ಕಾರ್ಯಪಡೆಯ ಮುಖ್ಯಸ್ಥರು ಇತ್ತೀಚೆಗೆ ಸಲಹೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆ.31ರಂದು ನಡೆದ ಸಭೆಯಲ್ಲಿ ಈ ಕೇಂದ್ರವನ್ನು ಮುಚ್ಚಲು ತೀರ್ಮಾನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆ೦ಗಳೂರು ಅ೦ತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ (ಬಿಐಇಸಿ) ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಗೊಂಡ 50 ದಿನಗಳಲ್ಲೇ ಮುಚ್ಚಲಾಗಿದೆ. ನಗರದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದ ಕಾರಣಕ್ಕೆ ಈ ಕೇಂದ್ರವನ್ನು ಮುಚ್ಚಿದ್ದಲ್ಲ! ಇಲ್ಲಿ ಆರೈಕೆಗೆ ಒಳಗಾಗಲು ಕೋವಿಡ್ ಸಂತ್ರಸ್ತರೇ ಮುಂದೆ ಬರುತ್ತಿಲ್ಲ. </p>.<p>ರೋಗ ಲಕ್ಷಣ ಇಲ್ಲದ ಕೋವಿಡ್ ಸೋಂಕಿತರ ಆರೈಕೆ ಸಲುವಾಗಿ ಈ ಕೇಂದ್ರವನ್ನು ಸರ್ಕಾರ ಆರಂಭಿಸಿತ್ತು. ಇಲ್ಲಿ 1,100 ಹಾಸಿಗೆ ವ್ಯವಸ್ಥೆ ಕಲ್ಪಿಸಲಿದ್ದು, ಇದು ದೇಶದ ಅತಿದೊಡ್ಡ ಆರೈಕೆ ಕೇಂದ್ರವಾಗಲಿದೆ ಎಂದು ಸರ್ಕಾರ ಹೇಳಿಕೊಂಡಿತ್ತು. ಆದರೆ, ಇಲ್ಲಿ ಅಳವಡಿಸಿದ್ದು 6,500 ಹಾಸಿಗೆಗಳನ್ನು ಮಾತ್ರ. ಈ ಕೇಂದ್ರವನ್ನು ಜುಲೈ 27ರಂದು ಉದ್ಘಾಟಿಸಲಾಗಿತ್ತು. 1500 ಹಾಸಿಗೆಗಳನ್ನು ಕೋವಿಡ್ ಸಂತ್ರಸ್ತರಿಗೆ ಹಾಗೂ 1,500 ಹಾಸಿಗೆಗಳನ್ನು ವೈದ್ಯರು ಮತ್ತು ಶೂಶ್ರೂಷಕರ ಪ್ರತ್ಯೇಕ ವಾಸಕ್ಕಾಗಿ ಕಾಯ್ದಿರಿಸಲಾಗಿತ್ತು. ಇತ್ತೀಚೆಗೆ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಆಸಕ್ತಿ ತೋರಿಸುತ್ತಿರುವುದರಿಂದ ಈ ಕೇಂದ್ರದ ಹಾಸಿಗೆಗಳು ಒಮ್ಮೆಯೂ ಭರ್ತಿ ಆಗಿರಲಿಲ್ಲ.</p>.<p>ಈ ಆರೈಕೆ ಕೇಂದ್ರವು ದೇಶದ ಅತಿ ದೊಡ್ಡ ಆರೈಕೆ ಕೇಂದ್ರ ಎಂಬ ಕಾರಣಕ್ಕೆ ಸುದ್ದಿಯಾಗಿದ್ದಕ್ಕಿಂತಲೂ ದುಬಾರಿ ವೆಚ್ಚದ ಕಾರಣಕ್ಕೆ ಸುದ್ದಿಯಾಗಿದ್ದೇ ಹೆಚ್ಚು. ಇಲ್ಲಿ ಅಳವಡಿಸುವ ಮಂಚ ಹಾಗೂ ಇತರ ಪರಿಕರಗಳಿಗೆ ದಿನಕ್ಕೆ ₹ 800 ಬಾಡಿಗೆ ನೀಡುವ ಪ್ರಸ್ತಾಪಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಈ ಪ್ರಸ್ತಾವ ಕೈಬಿಟ್ಟ ಸರ್ಕಾರ ಮಂಚ, ಹಾಸಿಗೆ ಸೇರಿದಂತೆ ಕೆಲವು ಪರಿಕರಗಳನ್ನು ಖರೀದಿಸಿ, ಕೆಲವನ್ನಷ್ಟೇ ಬಾಡಿಗೆಗೆ ಪಡೆಯಿತು.</p>.<p>‘ಬಿಐಇಸಿ ಕೋವಿಡ್ ಆರೈಕೆ ಕೇಂದ್ರವನ್ನು ಮಂಗಳವಾರರಿಂದ ಸ್ಥಗಿತಗೊಳಿಸಿದ್ದೇವೆ. ಇಲ್ಲಿ ಈಗ ಕೋವಿಡ್ ಸಂತ್ರಸ್ತರು ಯಾರೂ ಆರೈಕೆಗೆ ಒಳಗಾಗುತ್ತಿಲ್ಲ. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಸಮೀಪದ ಇತರ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕೇಂದ್ರದ ಉಕ್ಕಿನ ಮಂಚಗಳು, ಹಾಸಿಗೆಗಳು, ಫ್ಯಾನ್ಗಳು ಕಸದ ಬುಟ್ಟಿಗಳು, ಬಕೆಟ್ಗಳು, ಮಗ್ಗಳು, ನೀರು ಪೂರೈಸುವ ಪರಿಕರಗಳು ಹಾಗೂ ಇತರ ಪೀಠೋಪಕರಣಗಳನ್ನು ಸರ್ಕಾರಿ ಹಾಸ್ಟೆಲ್ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಉಚಿತವಾಗಿ ನೀಡುತ್ತಿದೆ.</p>.<p>ಬಾಗಲ ಕೋಟೆಯಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಿಗೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಹಾಗೂ ಜಿಕೆವಿಕೆಯ ಹಾಸ್ಟೆಲ್ಗೆ ತಲಾ 1 ಸಾವಿರ ಪೀಠೋಪಕರಣಗಳು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ 2,500 ಪೀಠೋಪಕರಣಗಳನ್ನು ಹಸ್ತಾಂತರಿಸಬೇಕು. ಉಳಿದ ಪೀಠೋಪಕರಣಗಳನ್ನು ಸರ್ಕಾರದ ಆಸ್ಪತ್ರೆಗಳಿಂದ ಹಾಗೂ ಹಾಸ್ಟೆಲ್ಗಳಿಂದ ಬರುವ ಕೋರಿಕೆಗಳ ಆಧಾರದಲ್ಲಿ ಹಸ್ತಾಂತರಿಸಲಾಗುತ್ತಿದೆ ಎಂದರು.</p>.<p>‘ಈ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರು ದಾಖಲಾಗುತ್ತಿಲ್ಲ. ಹಾಗಾಗಿ ಇದನ್ನು ಮುಚ್ಚಬಹುದು’ ಎಂದು ಕೋವಿಡ್ ಆರೈಕೆ ಕೇಂದ್ರಗಳ ಕಾರ್ಯಪಡೆಯ ಮುಖ್ಯಸ್ಥರು ಇತ್ತೀಚೆಗೆ ಸಲಹೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆ.31ರಂದು ನಡೆದ ಸಭೆಯಲ್ಲಿ ಈ ಕೇಂದ್ರವನ್ನು ಮುಚ್ಚಲು ತೀರ್ಮಾನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>