ಸಾಫ್ಟ್ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಗಣೇಶ್ ಕೃಷ್ಣ, ಪತ್ನಿಯನ್ನು ನಸುಕಿನ 1 ಗಂಟೆ ಸುಮಾರಿಗೆ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಜಯನಗರ ಪೊಲೀಸ್ ಠಾಣೆ ಸಮೀಪ ಮುಖ್ಯರಸ್ತೆಯಲ್ಲಿ ಮಧ್ಯದಲ್ಲಿ ಹಂಪ್ ಇರುವುದನ್ನು ಗಮನಿಸದೆ ಅತಿವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡ ಕಾರಣ, ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದರು.