ಬೆಂಗಳೂರು: ಅತಿ ವೇಗದಲ್ಲಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭದ್ರಪ್ಪ ಲೇಔಟ್ ಬಳಿ ನಡೆದಿದೆ.
ಕೊಡಿಗೇಹಳ್ಳಿ ನಿವಾಸಿ ಹೇಮಚಂದ್ರ ಸಿಂಗ್ (36) ಮೃತ ವ್ಯಕ್ತಿ. ವೇಗವಾಗಿ ಬಂದ ವಾಹನ ತಿರುವಿನಲ್ಲಿ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಹೇಮಚಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗಲಿಲ್ಲ.