ಎಎಪಿ: ನಾಳೆ ‘ಬೈಕ್ ತಳ್ಳು’ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷವು (ಎಎಪಿ) ಡಿ.23ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೆ ‘ಬೈಕ್ ತಳ್ಳು’ ಪ್ರತಿಭಟನೆ ಹಮ್ಮಿಕೊಂಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮುಖ್ಯ ವಕ್ತಾರ ಶರತ್ ಖಾದ್ರಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗಿದೆ. ಪೆಟ್ರೋಲ್, ಡೀಸೆಲ್ನ ಮೂಲ ಬೆಲೆಗಿಂತ ಮುಕ್ಕಾಲು ಪಾಲು ತೆರಿಗೆ ಕಟ್ಟಲಾಗುತ್ತಿದೆ. ಪೆಟ್ರೋಲ್ಗೆಂದು ಒಬ್ಬ ವ್ಯಕ್ತಿ ಮಾಸಿಕ ಐದು ಸಾವಿರವರೆಗೆ ಹಣ ವ್ಯಯಿಸುತ್ತಿದ್ದಾನೆ’ ಎಂದು ದೂರಿದರು.
‘ಇಂತಹ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರವಾದರೂ ಜನರ ನೆರವಿಗೆ ನಿಲ್ಲಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಪಾಲಿನ ತೆರಿಗೆಯನ್ನು ಕೂಡಲೇ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.