<p><strong>ಬೆಂಗಳೂರು:</strong> ಮತ್ತಿಕೆರೆಯಲ್ಲಿರುವ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಬಳಿ ಬುಧವಾರ ರಾತ್ರಿ ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನ ಡೇವಿಡ್ ಸೆಂಗೋಲ್ (33) ಮೃತಪಟ್ಟವರು.</p>.<p>ಮತ್ತಿಕೆರೆಯ ಪೇಯಿಂಗ್ ಗೆಸ್ಟ್ನಲ್ಲಿ ನೆಲಸಿದ್ದ ಡೇವಿಡ್ ಅವರು ಲಾಂಡ್ರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ರಾತ್ರಿ ಪಿ.ಜಿ.ಗೆ ವಾಪಸ್ ಆಗುತ್ತಿದ್ದರು. ಆಗ ಘಟನೆ ನಡೆದಿದೆ.</p>.<p>ಡೇವಿಡ್ ಮತ್ತು ವಿಜಯ್ ಎಂಬುವರ ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ತೀವ್ರ ಗಾಯವಾಗಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದರು.</p>.<p>ಅಪಘಾತದ ಸಂದರ್ಭದಲ್ಲಿ ಡೇವಿಡ್, ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ, ಅವರ ತಲೆಗೆ ಪೆಟ್ಟು ಬಿದ್ದಿದೆ. ಅವರ ಪತ್ನಿ ಮತ್ತು ಮಕ್ಕಳು ತಮಿಳುನಾಡಿನಲ್ಲಿ ನೆಲಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮತ್ತಿಕೆರೆಯಲ್ಲಿರುವ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಬಳಿ ಬುಧವಾರ ರಾತ್ರಿ ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನ ಡೇವಿಡ್ ಸೆಂಗೋಲ್ (33) ಮೃತಪಟ್ಟವರು.</p>.<p>ಮತ್ತಿಕೆರೆಯ ಪೇಯಿಂಗ್ ಗೆಸ್ಟ್ನಲ್ಲಿ ನೆಲಸಿದ್ದ ಡೇವಿಡ್ ಅವರು ಲಾಂಡ್ರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ರಾತ್ರಿ ಪಿ.ಜಿ.ಗೆ ವಾಪಸ್ ಆಗುತ್ತಿದ್ದರು. ಆಗ ಘಟನೆ ನಡೆದಿದೆ.</p>.<p>ಡೇವಿಡ್ ಮತ್ತು ವಿಜಯ್ ಎಂಬುವರ ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ತೀವ್ರ ಗಾಯವಾಗಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದರು.</p>.<p>ಅಪಘಾತದ ಸಂದರ್ಭದಲ್ಲಿ ಡೇವಿಡ್, ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ, ಅವರ ತಲೆಗೆ ಪೆಟ್ಟು ಬಿದ್ದಿದೆ. ಅವರ ಪತ್ನಿ ಮತ್ತು ಮಕ್ಕಳು ತಮಿಳುನಾಡಿನಲ್ಲಿ ನೆಲಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>