‘ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಅವರು ವರ್ತೂರಿನಲ್ಲಿ ನೆಲೆಸಿದ್ದರು. ಶುಕ್ರವಾರ ಮಧ್ಯಾಹ್ನ ತನ್ನ ಸ್ನೇಹಿತನ ಜೊತೆಗೆ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ವರ್ತೂರು ಮುಖ್ಯರಸ್ತೆಯ ಮಸೀದಿ ಎದುರು ತೆರಳುತ್ತಿದ್ದರು. ಆಗ ಎದುರಿನಿಂದ ವೇಗವಾಗಿ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಹಿಂಬದಿಯ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.