ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಬೈಕ್‌ಗೆ ಗುದ್ದಿದ ಬಸ್: ಬೇಕರಿ ಕೆಲಸಗಾರ ಸಾವು

Published 1 ಏಪ್ರಿಲ್ 2024, 15:23 IST
Last Updated 1 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ರಸ್ತೆಯಲ್ಲಿರುವ ಜಾಲಹಳ್ಳಿ ವೃತ್ತದಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಯೋಗೇಶ್ (21) ಎಂಬುವವರು ಮೃತಪಟ್ಟಿದ್ದಾರೆ.

‘ಹಾಸನದ ಯೋಗೇಶ್, ನೆಲಮಂಗಲದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ನೆಲಮಂಗಲದಿಂದ ನಗರಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಪೀಣ್ಯ ಸಂಚಾರ ಠಾಣೆಯ ಮೂಲಗಳು ಹೇಳಿವೆ.

‘ಯೋಗೇಶ್‌ ಅವರು ರಾಕ್‌ಲೈನ್ ಮಾಲ್ ಮುಂಭಾಗದಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಅದೇ ಮಾರ್ಗದಲ್ಲಿ ಖಾಸಗಿ ಬಸ್ ತೆರಳುತ್ತಿತ್ತು. ಚಾಲಕ ಅತೀ ವೇಗದಲ್ಲಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್‌, ಬೈಕ್‌ಗೆ ಡಿಕ್ಕಿ ಹೊಡೆದಿತ್ತು.’

‘ಅಪಘಾತದಿಂದ ತೀವ್ರ ಗಾಯಗೊಂಡು ಯೋಗೇಶ್‌ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಸ್‌ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT