ಬೆಂಗಳೂರು: ವಸಂತನಗರದ 8ನೇ ಅಡ್ಡರಸ್ತೆಯಲ್ಲಿ ಬೈಕ್ ಸವಾರರೊಬ್ಬರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿ ₹ 25 ಸಾವಿರ ಸುಲಿಗೆ ಮಾಡಿದ್ದಾರೆ.
ಭಾನುವಾರ ಸಂಜೆ 5.30ಕ್ಕೆ ನಡೆದಿರುವ ಘಟನೆ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ನೀಡಿರುವ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಅಂಗಡಿ ಇಟ್ಟುಕೊಂಡಿರುವ ದೂರುದಾರ, ವ್ಯಾಪಾರ ಮುಗಿಸಿ ಬೈಕ್ನಲ್ಲಿ ಮನೆಗೆ ಹೊರಟಿದ್ದರು. ಅದೇ ಸಂದರ್ಭದಲ್ಲೇ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.