<p><strong>ಬೆಂಗಳೂರು:</strong> ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ದೌರ್ಜನ್ಯ ನಡೆಸುತ್ತಿರುವ ಆಟೊ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೈಕ್ ಟ್ಯಾಕ್ಸಿ ಚಾಲಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬೈಕ್ ಟ್ಯಾಕ್ಸಿ ಚಾಲಕರ ಸಂಘದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಆಟೊ ಚಾಲಕರ ಕಿರುಕುಳದ ವಿರುದ್ಧ ಘೋಷಣೆ ಕೂಗಿದರು.</p>.<p>‘ಜೀವನೋಪಾಯಕ್ಕೆ ಬೈಕ್ ಟ್ಯಾಕ್ಸಿ ಆಧಾರವಾಗಿದೆ. ಆದರೆ, ಆಟೊ ಚಾಲಕರು ನಮ್ಮನ್ನು ಅಲ್ಲಲ್ಲಿ ಅಡ್ಡಗಟ್ಟಿ ಥಳಿಸುತ್ತಿದ್ದಾರೆ. ಭಯದ ನಡುವೆ ಜೀವನ ಸಾಗಿಸುವಂತಾಗಿದೆ’ ಎಂದು ಹೇಳಿದರು.</p>.<p>ಆಟೊ ಪ್ರಯಾಣ ದರ ದುಬಾರಿ ಆಗಿರುವುದರಿಂದ ಜನ ಬೈಕ್ ಟ್ಯಾಕ್ಸಿಗೆ ಒಲವು ತೋರುತ್ತಿದ್ದಾರೆ. ಪ್ರಯಾಣಕ್ಕೆ ಯಾವ ವಾಹನ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಜನರಿಗೆ ಬಿಟ್ಟ ವಿಚಾರ. ಆದರೆ, ನಾವು ಆಟೊ ಚಾಲಕರಿಗೆ ಹೆದರಿ ವೃತ್ತಿ ನಡೆಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ನಮ್ಮ ಮೇಲೆ ದೌರ್ಜನ್ಯ ನಡೆಸುವ ಆಟೊ ಚಾಲಕರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕ್ರಮ ಕೈಗೊಳ್ಳದಿದ್ದರೆ ಮತ್ತೆ ಧರಣಿ ನಡೆಸಲಾಗುವುದು’ ಎಂದು ಬೈಕ್ ಟ್ಯಾಕ್ಸಿ ಸಂಘದ ಅಧ್ಯಕ್ಷ ಆದಿ ನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ದೌರ್ಜನ್ಯ ನಡೆಸುತ್ತಿರುವ ಆಟೊ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೈಕ್ ಟ್ಯಾಕ್ಸಿ ಚಾಲಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬೈಕ್ ಟ್ಯಾಕ್ಸಿ ಚಾಲಕರ ಸಂಘದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಆಟೊ ಚಾಲಕರ ಕಿರುಕುಳದ ವಿರುದ್ಧ ಘೋಷಣೆ ಕೂಗಿದರು.</p>.<p>‘ಜೀವನೋಪಾಯಕ್ಕೆ ಬೈಕ್ ಟ್ಯಾಕ್ಸಿ ಆಧಾರವಾಗಿದೆ. ಆದರೆ, ಆಟೊ ಚಾಲಕರು ನಮ್ಮನ್ನು ಅಲ್ಲಲ್ಲಿ ಅಡ್ಡಗಟ್ಟಿ ಥಳಿಸುತ್ತಿದ್ದಾರೆ. ಭಯದ ನಡುವೆ ಜೀವನ ಸಾಗಿಸುವಂತಾಗಿದೆ’ ಎಂದು ಹೇಳಿದರು.</p>.<p>ಆಟೊ ಪ್ರಯಾಣ ದರ ದುಬಾರಿ ಆಗಿರುವುದರಿಂದ ಜನ ಬೈಕ್ ಟ್ಯಾಕ್ಸಿಗೆ ಒಲವು ತೋರುತ್ತಿದ್ದಾರೆ. ಪ್ರಯಾಣಕ್ಕೆ ಯಾವ ವಾಹನ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಜನರಿಗೆ ಬಿಟ್ಟ ವಿಚಾರ. ಆದರೆ, ನಾವು ಆಟೊ ಚಾಲಕರಿಗೆ ಹೆದರಿ ವೃತ್ತಿ ನಡೆಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ನಮ್ಮ ಮೇಲೆ ದೌರ್ಜನ್ಯ ನಡೆಸುವ ಆಟೊ ಚಾಲಕರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕ್ರಮ ಕೈಗೊಳ್ಳದಿದ್ದರೆ ಮತ್ತೆ ಧರಣಿ ನಡೆಸಲಾಗುವುದು’ ಎಂದು ಬೈಕ್ ಟ್ಯಾಕ್ಸಿ ಸಂಘದ ಅಧ್ಯಕ್ಷ ಆದಿ ನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>