ಬೆಂಗಳೂರು: ಕಚೇರಿ ಹಾಗೂ ಸಾರ್ವಜನಿಕ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಆರ್.ಎಂ.ಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
‘ಚಿಕ್ಕಬಾಣಾವರದ ಕುಂಬರಹಳ್ಳಿಯ ವೆಂಕಟೇಶ್ (18) ಹಾಗೂ ಸಂಜಯನಗರದ ನಾಗಶೆಟ್ಟಿಹಳ್ಳಿಯ ಕಾರ್ತಿಕ್ (28) ಬಂಧಿತರು. ಅವರಿಂದ ₹ 1.80 ಲಕ್ಷ ಮೌಲ್ಯದ 5 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಹ್ಯಾಂಡಲ್ ಲಾಕ್ ಮುರಿದು ಬೈಕ್ ಕದ್ದಿದ್ದ ಆರೋಪಿಗಳು, ಅವುಗಳನ್ನು ಮಾರಿ ಹಣ ಸಂಪಾದಿಸುತ್ತಿದ್ದರು. ಇತ್ತೀಚೆಗಷ್ಟೇ ಕದ್ದಿದ್ದ ಬೈಕ್ಗಳನ್ನು ಅವರು ಆಶ್ರಯನಗರದ ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದರು.’
‘ಇತ್ತೀಚೆಗಷ್ಟೇ ಯಶವಂತಪುರದಲ್ಲಿ ಜಯಪ್ರಕಾಶ್ ಎಂಬುವರ ಬೈಕ್ನ್ನು ಆರೋಪಿಗಳು ಕದ್ದಿದ್ದರು. ಅದು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದರ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪೀಣ್ಯ ಠಾಣೆ ವ್ಯಾಪ್ತಿಯಲ್ಲೂ ಬೈಕ್ ಕದ್ದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ತಿಳಿಸಿದರು.