<p><strong>ಬೆಂಗಳೂರು:</strong> ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ ಆರೋಪದಡಿ ಎನ್.ಲಕ್ಷ್ಮಿಪತಿ (24) ಎಂಬುವರನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶ ಕುಪ್ಪಂನ ಲಕ್ಷ್ಮಿಪತಿ, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದ. ಈತನನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬೆಂಗಳೂರಿಗೆ ಆಗಾಗ ಬರುತ್ತಿದ್ದ ಆರೋಪಿ, ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಲಾಕ್ ಮುರಿದು ಕದಿಯುತ್ತಿದ್ದ. ಅವುಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗುತ್ತಿದ್ದ. ಕಾರ್ಮಿಕನ ಸೋಗಿನಲ್ಲಿ ಹಣದ ಅವಶ್ಯಕತೆ ಇರುವುದಾಗಿ ಹೇಳಿ ಮಾರಾಟ ಮಾಡುತ್ತಿದ್ದ.’</p>.<p>‘ತಮಿಳುನಾಡಿನಲ್ಲೂ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ, ಅವುಗಳನ್ನು ಕರ್ನಾಟಕಕ್ಕೆ ತಂದು ನೋಂದಣಿ ಫಲಕ ಬದಲಾಯಿಸಿ ಮಾರುತ್ತಿದ್ದ. ನಂತರ, ಆಂಧ್ರಪ್ರದೇಶಕ್ಕೆ ಹೋಗಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ ಆರೋಪದಡಿ ಎನ್.ಲಕ್ಷ್ಮಿಪತಿ (24) ಎಂಬುವರನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶ ಕುಪ್ಪಂನ ಲಕ್ಷ್ಮಿಪತಿ, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದ. ಈತನನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬೆಂಗಳೂರಿಗೆ ಆಗಾಗ ಬರುತ್ತಿದ್ದ ಆರೋಪಿ, ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಲಾಕ್ ಮುರಿದು ಕದಿಯುತ್ತಿದ್ದ. ಅವುಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗುತ್ತಿದ್ದ. ಕಾರ್ಮಿಕನ ಸೋಗಿನಲ್ಲಿ ಹಣದ ಅವಶ್ಯಕತೆ ಇರುವುದಾಗಿ ಹೇಳಿ ಮಾರಾಟ ಮಾಡುತ್ತಿದ್ದ.’</p>.<p>‘ತಮಿಳುನಾಡಿನಲ್ಲೂ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ, ಅವುಗಳನ್ನು ಕರ್ನಾಟಕಕ್ಕೆ ತಂದು ನೋಂದಣಿ ಫಲಕ ಬದಲಾಯಿಸಿ ಮಾರುತ್ತಿದ್ದ. ನಂತರ, ಆಂಧ್ರಪ್ರದೇಶಕ್ಕೆ ಹೋಗಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>