ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ದ್ವಿಚಕ್ರ ವಾಹನ ಕದ್ದಿದ್ದವ ಬಂಧನ

Last Updated 21 ಫೆಬ್ರುವರಿ 2022, 15:50 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪಿ ವೆಂಕಟಸ್ವಾಮಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

‘ಅಪರಾಧ ಹಿನ್ನೆಲೆಯುಳ್ಳ ವೆಂಕಟಸ್ವಾಮಿ, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 6.70 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯಲ್ಲಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ‘ಟಿವಿಎಸ್‌ ಎಕ್ಸೆಲ್’ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಆರೋಪಿಯನ್ನು ತಡೆದು ತಪಾಸಣೆ ನಡೆಸಿದ್ದರು. ವಾಹನದ ದಾಖಲೆಗಳನ್ನು ಆರೋಪಿ ನೀಡಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ, ಆತನನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.

‘ಹ್ಯಾಂಡಲ್‌ ಲಾಕ್‌ ಮುರಿದು ದ್ವಿಚಕ್ರ ವಾಹನಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ತನ್ನದೇ ವಾಹನವೆಂದು ಹೇಳಿ ಮಾರುತ್ತಿದ್ದ. ಬಂದ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ. ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಜಹಂಕ, ಹೆಣ್ಣೂರು, ಕಾಡುಗೋಡಿ ಹಾಗೂ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT