‘ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ತನ್ನದೇ ವಾಹನವೆಂದು ಹೇಳಿ ಮಾರುತ್ತಿದ್ದ. ಬಂದ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ. ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಜಹಂಕ, ಹೆಣ್ಣೂರು, ಕಾಡುಗೋಡಿ ಹಾಗೂ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ಹೇಳಿದರು.