<p><strong>ಬೆಂಗಳೂರು:</strong> ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಶ್ರೀನಿವಾಸ್ ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>‘ತುಮಕೂರು ಜಿಲ್ಲೆಯ ಗುಬ್ಬಿಯ ಶ್ರೀನಿವಾಸ್, ಆಗಾಗ ನಗರಕ್ಕೆ ಬಂದು ಕೃತ್ಯ ಎಸಗುತ್ತಿದ್ದ. ಇವರಿಂದ ₹ 5.20 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಮಾಕ್ಷಿಪಾಳ್ಯದ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.</p>.<p class="Subhead">ಗೇರ್ಲೆಸ್ ವಾಹನ ಮಾತ್ರ ಕಳವು: ‘ಆರೋಪಿಗೆ ಗೇರ್ ಹೊಂದಿರುವ ವಾಹನಗಳನ್ನು ಚಲಾಯಿಸಲು ಬರುತ್ತಿರಲಿಲ್ಲ. ಹೀಗಾಗಿ, ಗೇರ್ ಇಲ್ಲದ ದ್ವಿಚಕ್ರ ವಾಹನಗಳಾದ ಟಿವಿಎಸ್ ಎಕ್ಸೆಲ್ ಹಾಗೂ ಸ್ಕೂಟರ್ಗಳನ್ನು ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಕದ್ದ ವಾಹನಗಳನ್ನು ತಮ್ಮೂರಿನವರೆಗೂ ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪಿ, ಅಲ್ಲಿಯೇ ಪರಿಚಯಸ್ಥರಿಗೆ ಮಾರಾಟ ಮಾಡುತ್ತಿದ್ದ. ಬಂದ ಹಣದಲ್ಲೇ ಜೀವನ ಸಾಗಿಸುತ್ತಿದ್ದ. ಹಣ ಖರ್ಚಾದ ಕೂಡಲೇ ಪುನಃ ನಗರಕ್ಕೆ ಬಂದು ಮತ್ತೊಂದು ವಾಹನ ಕದ್ದೊಯ್ಯುತ್ತಿದ್ದ. ವಾಹನ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಶ್ರೀನಿವಾಸ್ ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>‘ತುಮಕೂರು ಜಿಲ್ಲೆಯ ಗುಬ್ಬಿಯ ಶ್ರೀನಿವಾಸ್, ಆಗಾಗ ನಗರಕ್ಕೆ ಬಂದು ಕೃತ್ಯ ಎಸಗುತ್ತಿದ್ದ. ಇವರಿಂದ ₹ 5.20 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಮಾಕ್ಷಿಪಾಳ್ಯದ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.</p>.<p class="Subhead">ಗೇರ್ಲೆಸ್ ವಾಹನ ಮಾತ್ರ ಕಳವು: ‘ಆರೋಪಿಗೆ ಗೇರ್ ಹೊಂದಿರುವ ವಾಹನಗಳನ್ನು ಚಲಾಯಿಸಲು ಬರುತ್ತಿರಲಿಲ್ಲ. ಹೀಗಾಗಿ, ಗೇರ್ ಇಲ್ಲದ ದ್ವಿಚಕ್ರ ವಾಹನಗಳಾದ ಟಿವಿಎಸ್ ಎಕ್ಸೆಲ್ ಹಾಗೂ ಸ್ಕೂಟರ್ಗಳನ್ನು ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಕದ್ದ ವಾಹನಗಳನ್ನು ತಮ್ಮೂರಿನವರೆಗೂ ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪಿ, ಅಲ್ಲಿಯೇ ಪರಿಚಯಸ್ಥರಿಗೆ ಮಾರಾಟ ಮಾಡುತ್ತಿದ್ದ. ಬಂದ ಹಣದಲ್ಲೇ ಜೀವನ ಸಾಗಿಸುತ್ತಿದ್ದ. ಹಣ ಖರ್ಚಾದ ಕೂಡಲೇ ಪುನಃ ನಗರಕ್ಕೆ ಬಂದು ಮತ್ತೊಂದು ವಾಹನ ಕದ್ದೊಯ್ಯುತ್ತಿದ್ದ. ವಾಹನ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>