<p><strong>ಬೆಂಗಳೂರು</strong>: ನಗರದ ವಿವಿಧೆಡೆ ದ್ವಿಚಕ್ರ ವಾಹನ ಹಾಗೂ ಮೊಬೈಲ್ ದೋಚಿದ್ದ ಇಬ್ಬರು ದರೋಡೆಕೋರರನ್ನು ಬಂಧಿಸಿ, 11 ದ್ವಿಚಕ್ರ ವಾಹನ, ನಾಲ್ಕು ಮೊಬೈಲ್ಗಳನ್ನು ಕಲಾಸಿಪಾಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ .</p><p>ಸುರೇಶ್ ಮತ್ತು ಶಶಿಕುಮಾರ್ ಬಂಧಿತರು. ಮೇ 23ರಂದು ಮುಂಜಾನೆ 4 ಗಂಟೆ ಸುಮಾರಿನಲ್ಲಿ ಅರುಣ್ ಕುಮಾರ್ ಅವರು ಕೋಲಾರಕ್ಕೆ ಹೋಗಲು ಕಲಾಸಿಪಾಳ್ಯದ ಬಸ್ ನಿಲ್ದಾಣಕ್ಕೆ ಬಂದು ವಿಚಾರಿಸುತ್ತಿದ್ದರು. ಇದನ್ನು ಗಮನಿಸಿದ ಆರೋಪಿಗಳು ಹಿಂಬಾಲಿಸಿಕೊಂಡು ಹೋಗಿ, ಅವರನ್ನು ಬೆದರಿಸಿ ₹20 ಸಾವಿರ ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು.</p><p>ಈ ಬಗ್ಗೆ ಪ್ರಕರಣ ದಾಖಿಸಿಕೊಂಡು, ತನಿಖೆ ಕೈಗೊಂಡ ಪೊಲೀಸರು, ಮಾಹಿತಿಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು. ಕಳವು ಮಾಡಿರುವುದನ್ನು ಒಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದರು.</p><p>ಆರೋಪಿಗಳ ಬಂಧನದಿಂದ ಮಾಗಡಿ ರಸ್ತೆ, ತಾವರೆಕೆರೆ, ಬ್ಯಾಟರಾಯನಪುರ ಹಾಗೂ ಇತರೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನವಾಗಿದ್ದ 11 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ವಿವಿಧೆಡೆ ದ್ವಿಚಕ್ರ ವಾಹನ ಹಾಗೂ ಮೊಬೈಲ್ ದೋಚಿದ್ದ ಇಬ್ಬರು ದರೋಡೆಕೋರರನ್ನು ಬಂಧಿಸಿ, 11 ದ್ವಿಚಕ್ರ ವಾಹನ, ನಾಲ್ಕು ಮೊಬೈಲ್ಗಳನ್ನು ಕಲಾಸಿಪಾಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ .</p><p>ಸುರೇಶ್ ಮತ್ತು ಶಶಿಕುಮಾರ್ ಬಂಧಿತರು. ಮೇ 23ರಂದು ಮುಂಜಾನೆ 4 ಗಂಟೆ ಸುಮಾರಿನಲ್ಲಿ ಅರುಣ್ ಕುಮಾರ್ ಅವರು ಕೋಲಾರಕ್ಕೆ ಹೋಗಲು ಕಲಾಸಿಪಾಳ್ಯದ ಬಸ್ ನಿಲ್ದಾಣಕ್ಕೆ ಬಂದು ವಿಚಾರಿಸುತ್ತಿದ್ದರು. ಇದನ್ನು ಗಮನಿಸಿದ ಆರೋಪಿಗಳು ಹಿಂಬಾಲಿಸಿಕೊಂಡು ಹೋಗಿ, ಅವರನ್ನು ಬೆದರಿಸಿ ₹20 ಸಾವಿರ ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು.</p><p>ಈ ಬಗ್ಗೆ ಪ್ರಕರಣ ದಾಖಿಸಿಕೊಂಡು, ತನಿಖೆ ಕೈಗೊಂಡ ಪೊಲೀಸರು, ಮಾಹಿತಿಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು. ಕಳವು ಮಾಡಿರುವುದನ್ನು ಒಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದರು.</p><p>ಆರೋಪಿಗಳ ಬಂಧನದಿಂದ ಮಾಗಡಿ ರಸ್ತೆ, ತಾವರೆಕೆರೆ, ಬ್ಯಾಟರಾಯನಪುರ ಹಾಗೂ ಇತರೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನವಾಗಿದ್ದ 11 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>