<p><strong>ಬೆಂಗಳೂರು:</strong> ಹನುಮಂತನಗರ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹನುಮಂತನಗರ ಠಾಣಾ ವ್ಯಾಪ್ತಿಯ ಶ್ರೀನಗರದ ಅಪಾರ್ಟ್ಮೆಂಟ್ ನಿವಾಸಿ ಸೂರಜ್ ಅವರ ದ್ವಿಚಕ್ರ ವಾಹನ ಕಳವು ಆಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಶ್ರೀನಗರದ ಶಾಮಣ್ಣ ಉದ್ಯಾನ ಬಳಿ ಆರೋಪಿ ತೌಫೀಕ್ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.</p>.<p>‘ಆರೋಪಿ ನೀಡಿದ ಮಾಹಿತಿ ಆಧರಿಸಿ ಕೆಂಪೇಗೌಡ ಆಟದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ₹1 ಲಕ್ಷ ಮೌಲ್ಯದ ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿಯ ಬಂಧನದಿಂದ ಮೂರು ಪ್ರಕರಣ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<p>ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಜಿ.ರಸ್ತೆ ನಿವಾಸಿ ಮೊಹದ್ದೀನ್ ಜಿಲಾನಿ ಅವರು ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳುವಾಗಿತ್ತು.</p>.<p>ಪ್ರಕರಣ ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿದ ಪೊಲೀಸರು, ಬಿಎಂಟಿಸಿ ಬಸ್ ಡಿಪೊ ಬಳಿ ಆರೋಪಿ ಮಾರಿಮುತ್ತು ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಯಿಂದ ₹60 ಸಾವಿರ ಮೌಲ್ಯದ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹನುಮಂತನಗರ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹನುಮಂತನಗರ ಠಾಣಾ ವ್ಯಾಪ್ತಿಯ ಶ್ರೀನಗರದ ಅಪಾರ್ಟ್ಮೆಂಟ್ ನಿವಾಸಿ ಸೂರಜ್ ಅವರ ದ್ವಿಚಕ್ರ ವಾಹನ ಕಳವು ಆಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಶ್ರೀನಗರದ ಶಾಮಣ್ಣ ಉದ್ಯಾನ ಬಳಿ ಆರೋಪಿ ತೌಫೀಕ್ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.</p>.<p>‘ಆರೋಪಿ ನೀಡಿದ ಮಾಹಿತಿ ಆಧರಿಸಿ ಕೆಂಪೇಗೌಡ ಆಟದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ₹1 ಲಕ್ಷ ಮೌಲ್ಯದ ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿಯ ಬಂಧನದಿಂದ ಮೂರು ಪ್ರಕರಣ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<p>ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಜಿ.ರಸ್ತೆ ನಿವಾಸಿ ಮೊಹದ್ದೀನ್ ಜಿಲಾನಿ ಅವರು ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳುವಾಗಿತ್ತು.</p>.<p>ಪ್ರಕರಣ ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿದ ಪೊಲೀಸರು, ಬಿಎಂಟಿಸಿ ಬಸ್ ಡಿಪೊ ಬಳಿ ಆರೋಪಿ ಮಾರಿಮುತ್ತು ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಯಿಂದ ₹60 ಸಾವಿರ ಮೌಲ್ಯದ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>