ಬೆಂಗಳೂರು: ನಗರದ ಹಲಸೂರಿನಲ್ಲಿ ರಸ್ತೆ ಗುಂಡಿಯಿಂದಾಗಿ ಬಿದ್ದ ಬೈಕ್ ಸವಾರ ಅರ್ಧ ದಿನ, ಬಿದ್ದ ಜಾಗದಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಬೈಕ್ ಸವಾರಶನಿವಾರಪ್ರತಿಭಟನೆ ನಡೆಸುತ್ತಿರುವ ವಿಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.
#TroubleEngineSarkara (ಟ್ರಬಲ್ ಎಂಜಿನ್ ಸರ್ಕಾರ) ಟ್ಯಾಗ್ ಬಳಸಿ,ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿತ ಬಿಜೆಪಿಗೆ ಬೇಕಿಲ್ಲವೇ? ಎಂದು ಕೇಳಿದೆ.
ಹಾಗೆಯೇ, ರಾಜ್ಯ ಸರ್ಕಾರವು ಮಾನ, ಮರ್ಯಾದೆ, ನಾಚಿಕೆಮೂರನ್ನೂ ಬಿಟ್ಟಿದೆ ಎಂದು ಕಿಡಿಕಾರಿದೆ.
ಬೆಂಗಳೂರಿನ ಹಲಸೂರಿನಲ್ಲಿನ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಸುಮಾರು ಅರ್ಧ ದಿನ ಬಿದ್ದ ಜಾಗದಲ್ಲೇ ಕುಳಿತು ಪ್ರತಿಭಟಿಸಿದ್ದಾರೆ.
— Karnataka Congress (@INCKarnataka) November 12, 2022
ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿತ ಬಿಜೆಪಿಗೆ ಬೇಕಿಲ್ಲವೇ?
"ಮಾನ, ಮರ್ಯಾದೆ, ನಾಚಿಕೆ"
ಈ ಮೂರನ್ನೂ ಬಿಟ್ಟಿದೆ#TroubleEngineSarkara pic.twitter.com/pPMhG4A1og
ಪೀಣ್ಯ 2ನೇ ಹಂತದ ನಿವಾಸಿ ಎಸ್.ಸುಗುಣ ಎನ್ನುವವರು ರಸ್ತೆ ಗುಂಡಿಯಿಂದಾಗಿ ಅಪಘಾತಕ್ಕೀಡಾಗಿಚಿಕಿತ್ಸೆಗೆ ₹ 7.5 ಲಕ್ಷ ಶುಲ್ಕ ಭರಿಸಬೇಕಾಗಿದೆ ಎಂಬ ವರದಿಪ್ರಜಾವಾಣಿಯಲ್ಲಿ ನವೆಂಬರ್ 8ರಂದು ವರದಿ ಪ್ರಕಟವಾಗಿತ್ತು.
ಸುಗುಣ ಅವರುಅಕ್ಟೋಬರ್ 16ರಂದು ನಂದಿನಿ ಲೇಔಟ್ನಿಂದ ಮರಳುತ್ತಿದ್ದಾಗತಮ್ಮ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ದೊಡ್ಡ ರಸ್ತೆಗುಂಡಿಗೆ ದ್ವಿಚಕ್ರ ವಾಹನದ ಚಕ್ರ ಇಳಿದು ಆಯತಪ್ಪಿ ಬಿದ್ದಿದ್ದರು. ಅವರು 15 ದಿನಗಳ ಆಸ್ಪತ್ರೆ ಚಿಕಿತ್ಸೆಗೆ ₹ 7.5 ಲಕ್ಷ ಶುಲ್ಕ ಭರಿಸಬೇಕಾಗಿ ಬಂದಿದ್ದೇ ಅಲ್ಲದೆ, ಆರು ವಾರ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ ತಲುಪಿದ್ದಾರೆ.
ಇಂತಹ ಪ್ರಕರಣಗಳು ನಗರದಲ್ಲಿ ಮರುಕಳಿಸುತ್ತಲೇ ಇವೆ.ಈ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಸಾರ್ವಜನಿಕರು ಆಗಾಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿರುತ್ತಾರೆ.
ಬೆಂಗಳೂರಿನಲ್ಲಿನ ರಸ್ತೆಗಳಲ್ಲಿರುವ 11 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ನವೆಂಬರ್ 10ರೊಳಗೆ ಮುಚ್ಚಬೇಕು ಎಂದು ಬಿಬಿಎಂಪಿ, ಎಂಜಿನಿಯರ್ಗಳಿಗೆ ಸೂಚಿಸಿತ್ತು. ಇಲ್ಲದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.