<p><strong>ಬೆಂಗಳೂರು:</strong> ‘ನೂತನ ಜೈವಿಕ ಇಂಧನ ನೀತಿ’ಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ ಸುಧೀಂದ್ರ ತಿಳಿಸಿದರು.</p>.<p>ಮಂಡಳಿಯ 42ನೇ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉದ್ದೇಶಿತ ಜೈವಿಕ ಇಂಧನ ನೀತಿ ಕುರಿತು ಚರ್ಚೆ ನಡೆಸಿದ ಅವರು, ‘ಜೈವಿಕ ಇಂಧನ ನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ’ ಎಂದು ವಿವರಿಸಿದರು. </p>.<p>ಇದೇ ವೇಳೆ 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಲಾಯಿತು.</p>.<p>ಕಾರ್ಯಕಾರಿ ಸಮಿತಿಯ ಸದಸ್ಯ ಕೃಷ್ಣನ್, ‘ಜೈವಿಕ ಇಂಧನ ಕ್ಷೇತ್ರದಲ್ಲಿ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಕಂಪ್ರೆಸ್ಡ್ ಬಯೋಗ್ಯಾಸ್, ಬಯೋಮಾಸ್ ಆಧಾರಿತ ಗ್ರೀನ್ ಹೈಡ್ರೋಜನ್ಗಳು ಆಟೊಮೊಬೈಲ್ ಕಂಪನಿಗಳಲ್ಲಿನ ವಿದ್ಯುತ್ ಬೇಡಿಕೆಗಳನ್ನು ಸುಧಾರಿಸುವಲ್ಲಿ ನೆರವಾಗಲಿವೆ’ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಅವಶ್ಯವಾದ ಹೊಂಗೆ, ಬೇವು, ಹಿಪ್ಪೆ ಸೀಮರೂಬ ಮರಗಳಿಂದ ಬೀಜಗಳನ್ನು ಸಂಗ್ರಹಿಸುವ ಕುರಿತು ಉಪ ಸಮಿತಿ ರಚಿಸಲು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಸೂಚಿಸಿದರು.</p>.<p>ಸಭೆಯಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್, ಸದಸ್ಯ ದಿವಾಕರ್ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ಕಾರ್ಯದರ್ಶಿ ಎಂ.ಎಂ.ರಾಜು, ಡಿಸಿಎಫ್ ಮತ್ತು ತಾಂತ್ರಿಕ ಅಧಿಕಾರಿ ಲೋಹಿತ್ ಬಿ.ಆರ್ ಹಾಗೂ ಕೆಎಸ್ಆರ್ಟಿಸಿ, ಕೆಎಸ್ಸಿಎಸ್ಟಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನೂತನ ಜೈವಿಕ ಇಂಧನ ನೀತಿ’ಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ ಸುಧೀಂದ್ರ ತಿಳಿಸಿದರು.</p>.<p>ಮಂಡಳಿಯ 42ನೇ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉದ್ದೇಶಿತ ಜೈವಿಕ ಇಂಧನ ನೀತಿ ಕುರಿತು ಚರ್ಚೆ ನಡೆಸಿದ ಅವರು, ‘ಜೈವಿಕ ಇಂಧನ ನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ’ ಎಂದು ವಿವರಿಸಿದರು. </p>.<p>ಇದೇ ವೇಳೆ 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಲಾಯಿತು.</p>.<p>ಕಾರ್ಯಕಾರಿ ಸಮಿತಿಯ ಸದಸ್ಯ ಕೃಷ್ಣನ್, ‘ಜೈವಿಕ ಇಂಧನ ಕ್ಷೇತ್ರದಲ್ಲಿ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಕಂಪ್ರೆಸ್ಡ್ ಬಯೋಗ್ಯಾಸ್, ಬಯೋಮಾಸ್ ಆಧಾರಿತ ಗ್ರೀನ್ ಹೈಡ್ರೋಜನ್ಗಳು ಆಟೊಮೊಬೈಲ್ ಕಂಪನಿಗಳಲ್ಲಿನ ವಿದ್ಯುತ್ ಬೇಡಿಕೆಗಳನ್ನು ಸುಧಾರಿಸುವಲ್ಲಿ ನೆರವಾಗಲಿವೆ’ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಅವಶ್ಯವಾದ ಹೊಂಗೆ, ಬೇವು, ಹಿಪ್ಪೆ ಸೀಮರೂಬ ಮರಗಳಿಂದ ಬೀಜಗಳನ್ನು ಸಂಗ್ರಹಿಸುವ ಕುರಿತು ಉಪ ಸಮಿತಿ ರಚಿಸಲು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಸೂಚಿಸಿದರು.</p>.<p>ಸಭೆಯಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್, ಸದಸ್ಯ ದಿವಾಕರ್ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ಕಾರ್ಯದರ್ಶಿ ಎಂ.ಎಂ.ರಾಜು, ಡಿಸಿಎಫ್ ಮತ್ತು ತಾಂತ್ರಿಕ ಅಧಿಕಾರಿ ಲೋಹಿತ್ ಬಿ.ಆರ್ ಹಾಗೂ ಕೆಎಸ್ಆರ್ಟಿಸಿ, ಕೆಎಸ್ಸಿಎಸ್ಟಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>