<p><strong>ಬೆಂಗಳೂರು:</strong> ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು, ಜೈವಿಕ ಇಂಧನ ಕಾರ್ಯಯೋಜನೆ ಮತ್ತು ಮಂಡಳಿ ಅಧ್ಯಕ್ಷರಾಗಿ ತಮ್ಮ ಒಂದು ವರ್ಷದ ಕಾರ್ಯಗಳ ವರದಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರ ಸಲ್ಲಿಸಿದರು.</p>.<p>‘ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹೊಸ ಜೈವಿಕ ಇಂಧನ ನೀತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಂಡಳಿ ಕಾರ್ಯೋನ್ಮುಖವಾಗಿದೆ’ ಎಂದು ಉಪಮುಖ್ಯಮಂತ್ರಿಗೆ ವಿವರಿಸಿದರು.</p>.<p>‘ಜೈವಿಕ ಇಂಧನ ನೀತಿಗೆ ಸರ್ಕಾರದಿಂದ ಅನುಮೋದನೆ ದೊರೆತು, ಅನುಷ್ಠಾನಗೊಂಡರೆ ಹಾಗೂ ಉತ್ಪಾದನಾ ಘಟಕಗಳಿಗೆ ರಿಯಾಯಿತಿ, ಪ್ರೋತ್ಸಾಹ ಹಾಗೂ ಮೂಲಸೌಕರ್ಯ ಒದಗಿಸಿದರೆ ಮುಂದಿನ ಐದು ವರ್ಷಗಳಲ್ಲಿ ₹ 1 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಬಹುದು’ ಎಂದು ಹೇಳಿದರು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿ.ಕೆ.ಶಿವಕುಮಾರ್, ‘ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಎಲ್ಲಾ ಹಂತದಲ್ಲೂ ಸಹಕಾರ ನೀಡಲಿದೆ. ನೂತನ ಜೈವಿಕ ಇಂಧನ ನೀತಿ ಅನುಮೋದನೆಗೆ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಲ್. ಶಿವಶಂಕರ್, ಸದಸ್ಯರಾದ ದಿವಾಕರ್ ರಾವ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು, ಜೈವಿಕ ಇಂಧನ ಕಾರ್ಯಯೋಜನೆ ಮತ್ತು ಮಂಡಳಿ ಅಧ್ಯಕ್ಷರಾಗಿ ತಮ್ಮ ಒಂದು ವರ್ಷದ ಕಾರ್ಯಗಳ ವರದಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರ ಸಲ್ಲಿಸಿದರು.</p>.<p>‘ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹೊಸ ಜೈವಿಕ ಇಂಧನ ನೀತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಂಡಳಿ ಕಾರ್ಯೋನ್ಮುಖವಾಗಿದೆ’ ಎಂದು ಉಪಮುಖ್ಯಮಂತ್ರಿಗೆ ವಿವರಿಸಿದರು.</p>.<p>‘ಜೈವಿಕ ಇಂಧನ ನೀತಿಗೆ ಸರ್ಕಾರದಿಂದ ಅನುಮೋದನೆ ದೊರೆತು, ಅನುಷ್ಠಾನಗೊಂಡರೆ ಹಾಗೂ ಉತ್ಪಾದನಾ ಘಟಕಗಳಿಗೆ ರಿಯಾಯಿತಿ, ಪ್ರೋತ್ಸಾಹ ಹಾಗೂ ಮೂಲಸೌಕರ್ಯ ಒದಗಿಸಿದರೆ ಮುಂದಿನ ಐದು ವರ್ಷಗಳಲ್ಲಿ ₹ 1 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಬಹುದು’ ಎಂದು ಹೇಳಿದರು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿ.ಕೆ.ಶಿವಕುಮಾರ್, ‘ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಎಲ್ಲಾ ಹಂತದಲ್ಲೂ ಸಹಕಾರ ನೀಡಲಿದೆ. ನೂತನ ಜೈವಿಕ ಇಂಧನ ನೀತಿ ಅನುಮೋದನೆಗೆ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಲ್. ಶಿವಶಂಕರ್, ಸದಸ್ಯರಾದ ದಿವಾಕರ್ ರಾವ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>