ಕೇಂದ್ರದ ಉದ್ದೇಶದ ಕುರಿತು ಐಐಎಸ್ಸಿಯ ಡಾ.ಕಾರ್ತಿಕ್ ಸುಣಗಾರ್ ಮಾತನಾಡಿ, ‘ಪರಿಸರದಲ್ಲಿ ಹಾವಿನಂತಹ ಸರೀಸೃಪಗಳಿಗೂ ಪ್ರಮುಖ ಸ್ಥಾನವಿದೆ. ಆದರೆ, ಅವುಗಳ ಕಡಿತದಿಂದ ಉಂಟಾಗುವ ಸಾವು ನೋವುಗಳನ್ನು ಕಡಿಮೆ ಮಾಡುವ ಜೀವರಕ್ಷಕ ಪ್ರತಿವಿಷಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಈಗ ಇರುವ ಕೊರತೆಯನ್ನು ಹೋಗಲಾಡಿಸುವುದು ನೂತನ ಕೇಂದ್ರದ ಗುರಿಯಾಗಿದೆ’ ಎಂದು ಅವರು ಹೇಳಿದರು.