‘ಆತಂಕ ಪಡುವ ಅಗತ್ಯವಿಲ್ಲ’
‘ಈವರೆಗೆ ಯಾವುದೇ ಮನುಷ್ಯರಲ್ಲಿ ಹಕ್ಕಿ ಜ್ವರ ವರದಿಯಾಗಿಲ್ಲ. ಹಾಗಾಗಿ, ಜನರು ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಜಾಗರೂಕರಾಗಿರಬೇಕು. ಅನಾರೋಗ್ಯ ಪೀಡಿತ ಹಾಗೂ ಮೃತ ಹಕ್ಕಿಗಳ ಸಂಪರ್ಕದಿಂದ ದೂರ ಇರಬೇಕು. ಯಾವುದೇ ರೀತಿಯ ಸಂದೇಹ ಉಂಟಾದಲ್ಲಿ ತಕ್ಷಣ ಪಶುಸಂಗೋಪನೆ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ ಸೇವಿಸಬೇಕು. ಆರೋಗ್ಯ ಇಲಾಖೆ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.