<p><strong>ಬೆಂಗಳೂರು:</strong> ವಿವಿಧ ರಾಜಕೀಯ ಪಕ್ಷಗಳಿಗೆ ದುಡಿದ ಎಷ್ಟೋ ಜನರು ಯಾವ ಸ್ಥಾನಮಾನವೂ ಇಲ್ಲದೆ ತೆರೆಗೆ ಸರಿದಿದ್ದಾರೆ. ಅಧಿಕಾರ ಪಡೆಯುವ ನಾಯಕರು ಅಂಥವರ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.</p>.<p>ನಗರದಲ್ಲಿ ಗುರುವಾರ ‘ದಿ ನ್ಯಾಶನಲ್ ಕೋ ಆಪರೇಟಿವ್ ಬ್ಯಾಂಕ್’ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಸಚಿವ ದಿ.ವಿ.ಎಸ್. ಕೃಷ್ಣಯ್ಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಸಚಿವ ಕೃಷ್ಣಯ್ಯರ್ ಅವರು ಕಾಂಗ್ರೆಸ್ನ ನಿಷ್ಠಾವಂತ ಮುಖಂಡರಾಗಿದ್ದರು. ಅವರ ಜೀವಿತಾವಧಿಯಲ್ಲಿ ಸಚಿವರಾಗುವ ಅವಕಾಶ ಸಿಕ್ಕಿದ್ದು ನಾಲ್ಕೇ ತಿಂಗಳು. ವಹಿಸಿದ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡುತ್ತಿದ್ದರು ಎಂದು ಸ್ಮರಿಸಿದರು.</p>.<p>ಆರೋಗ್ಯ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆಗೂ ಅವರ ಬಳಿ ಹಣವಿರಲಿಲ್ಲ. ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ₹13 ಲಕ್ಷ ಭರಿಸಿದ್ದರು. ಅಂತಹ ನಾಯಕನ ಜೀವನ ಚರಿತ್ರೆ ಪಠ್ಯವಾಗಬೇಕು ಎಂದು ಅವರು ಹೇಳಿದರು.</p>.<p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಕೃಷ್ಣಯ್ಯರ್ ಅವರ ಜತೆಗಿನ ರಾಜಕೀಯ ಒಡನಾಟದ ಘಟನೆಗಳನ್ನು ಮೆಲುಕು ಹಾಕಿದರು.</p>.<p>ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಸಿ.ಕೃಷ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಶಾಸಕರಾದ ಎಲ್.ಎ.ರವಿ ಸುಬ್ರಹ್ಮಣ್ಯ, ಯು.ಬಿ.ವೆಂಕಟೇಶ್, ಅ.ದೇವೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ರಾಜಕೀಯ ಪಕ್ಷಗಳಿಗೆ ದುಡಿದ ಎಷ್ಟೋ ಜನರು ಯಾವ ಸ್ಥಾನಮಾನವೂ ಇಲ್ಲದೆ ತೆರೆಗೆ ಸರಿದಿದ್ದಾರೆ. ಅಧಿಕಾರ ಪಡೆಯುವ ನಾಯಕರು ಅಂಥವರ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.</p>.<p>ನಗರದಲ್ಲಿ ಗುರುವಾರ ‘ದಿ ನ್ಯಾಶನಲ್ ಕೋ ಆಪರೇಟಿವ್ ಬ್ಯಾಂಕ್’ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಸಚಿವ ದಿ.ವಿ.ಎಸ್. ಕೃಷ್ಣಯ್ಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಸಚಿವ ಕೃಷ್ಣಯ್ಯರ್ ಅವರು ಕಾಂಗ್ರೆಸ್ನ ನಿಷ್ಠಾವಂತ ಮುಖಂಡರಾಗಿದ್ದರು. ಅವರ ಜೀವಿತಾವಧಿಯಲ್ಲಿ ಸಚಿವರಾಗುವ ಅವಕಾಶ ಸಿಕ್ಕಿದ್ದು ನಾಲ್ಕೇ ತಿಂಗಳು. ವಹಿಸಿದ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡುತ್ತಿದ್ದರು ಎಂದು ಸ್ಮರಿಸಿದರು.</p>.<p>ಆರೋಗ್ಯ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆಗೂ ಅವರ ಬಳಿ ಹಣವಿರಲಿಲ್ಲ. ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ₹13 ಲಕ್ಷ ಭರಿಸಿದ್ದರು. ಅಂತಹ ನಾಯಕನ ಜೀವನ ಚರಿತ್ರೆ ಪಠ್ಯವಾಗಬೇಕು ಎಂದು ಅವರು ಹೇಳಿದರು.</p>.<p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಕೃಷ್ಣಯ್ಯರ್ ಅವರ ಜತೆಗಿನ ರಾಜಕೀಯ ಒಡನಾಟದ ಘಟನೆಗಳನ್ನು ಮೆಲುಕು ಹಾಕಿದರು.</p>.<p>ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಸಿ.ಕೃಷ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಶಾಸಕರಾದ ಎಲ್.ಎ.ರವಿ ಸುಬ್ರಹ್ಮಣ್ಯ, ಯು.ಬಿ.ವೆಂಕಟೇಶ್, ಅ.ದೇವೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>