‘ಕರುಣೆ ಮತ್ತು ಸೇವೆ ಏಸುಕ್ರಿಸ್ತನ ಸಂದೇಶವಾಗಿತ್ತು ಎಂದು ಮೋದಿಯವರು ಹೇಳಿದ್ದಾರೆ. ಈ ಸಂದೇಶವನ್ನು ಅವರು ಸಕಾರಾತ್ಮಕವಾಗಿ ಮುಂದುವರಿಸಲು ಕ್ರೈಸ್ತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವತ್ತ ಕಾರ್ಯಪ್ರವೃತ್ತರಾಗಬೇಕು. ಕ್ರೈಸ್ತರ ವಿರುದ್ಧದ ದ್ವೇಷ ಭಾಷಣಗಳು, ಚರ್ಚ್ಗಳು ಹಾಗೂ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿಗಳನ್ನು ನಿಯಂತ್ರಿಸಬೇಕು. ದೇಶದ ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಮೂಲಕ ಕ್ರೈಸ್ತರನ್ನು ಸಾಂವಿಧಾನಿಕ ಹಕ್ಕುಗಳಿಂದ ವಂಚಿಸುವ ಕೆಲಸ ನಡೆಯುತ್ತಿದೆ. ಇಂಥ ಸಂದರ್ಭಗಳಲ್ಲಿ ಪ್ರಧಾನ ಮಂತ್ರಿ ಸಚಿವಾಲಯವು ಮಧ್ಯಪ್ರವೇಶಿಸುವ ಮೂಲಕ ಈ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದು ವಿನಂತಿಸಿದ್ದಾರೆ.