<p>ಬೆಂಗಳೂರು:ವಾಸವಿ ಪೀಠದ ದ್ವಿತೀಯ ಪೀಠಾಧಿಪತಿಯಾಗಿ ಸಚ್ಚಿದಾನಂದ ಸರಸ್ವತಿ ಅವರ ಪೀಠಾರೋಹಣ ಕಾರ್ಯಕ್ರಮ ಇದೇ 20ರಂದು ಮಲ್ಲೇಶ್ವರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಸರಳವಾಗಿ ನೆರವೇರಲಿದೆ.</p>.<p>‘ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿತ್ತು. ಕೋವಿಡ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಲಾಗಿದೆ. ಆನ್ಲೈನ್ನಲ್ಲೂಕಾರ್ಯಕ್ರಮದ ನೇರಪ್ರಸಾರ ಇರಲಿದೆ’ ಎಂದು ವಾಸವಿ ಪೀಠಾರೋಹಣ ಸಮಿತಿ ಅಧ್ಯಕ್ಷ ಮಾನಂದಿ ಸುರೇಶ್ ತಿಳಿಸಿದರು.</p>.<p>‘ಪೀಠಾರೋಹಣ ಸಂದರ್ಭದಲ್ಲಿ ರಾಜ್ಯದಲ್ಲಿರುವ ವಾಸವಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ವೃದ್ಧಾಶ್ರಮ, ಅನಾಥಾಶ್ರಮ ಹಾಗೂ ಆಸ್ಪತ್ರೆಗಳಲ್ಲಿ ಅನ್ನದಾನ ಇರಲಿದೆ. ಜೂನ್ 17ರಿಂದಪೀಠಾರೋಹಣದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಫೇಸ್ಬುಕ್ ಹಾಗೂ ಯುಟ್ಯೂಬ್ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗುವುದು.ಕಾರ್ಯಕ್ರಮಕ್ಕೆ ಶುಭಕೋರುವ ವಿಡಿಯೊಗಳನ್ನು ಇಮೇಲ್–kavmss@gmail.com ಅಥವಾ 9663900439 ಸಂಖ್ಯೆಗೆ ವಾಟ್ಸ್ಆ್ಯಪ್ ಮಾಡಬಹುದು’ಎಂದರು.</p>.<p>1989ರಲ್ಲಿ ಜನಿಸಿದ ಸಚ್ಚಿದಾನಂದ ಸರಸ್ವತಿ ಅವರು ಶಿವಮೊಗ್ಗದ ಉಮಾ ಹಾಗೂ ಭೂಪಾಳಂ ನಾಗರಾಜ್ ದಂಪತಿಯ ಪುತ್ರ. ಶಿವಮೊಗ್ಗದ ವಾಸವಿ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಕ್ರೈಸ್ಟ್ ವಿಶ್ವವಿದ್ಯಾಲಯದಿಂದ ನಿರ್ವಹಣೆ ವಿಷಯದಲ್ಲಿ ಚಿನ್ನದ ಪದಕದೊಂದಿಗೆ ಪದವಿ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:ವಾಸವಿ ಪೀಠದ ದ್ವಿತೀಯ ಪೀಠಾಧಿಪತಿಯಾಗಿ ಸಚ್ಚಿದಾನಂದ ಸರಸ್ವತಿ ಅವರ ಪೀಠಾರೋಹಣ ಕಾರ್ಯಕ್ರಮ ಇದೇ 20ರಂದು ಮಲ್ಲೇಶ್ವರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಸರಳವಾಗಿ ನೆರವೇರಲಿದೆ.</p>.<p>‘ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿತ್ತು. ಕೋವಿಡ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಲಾಗಿದೆ. ಆನ್ಲೈನ್ನಲ್ಲೂಕಾರ್ಯಕ್ರಮದ ನೇರಪ್ರಸಾರ ಇರಲಿದೆ’ ಎಂದು ವಾಸವಿ ಪೀಠಾರೋಹಣ ಸಮಿತಿ ಅಧ್ಯಕ್ಷ ಮಾನಂದಿ ಸುರೇಶ್ ತಿಳಿಸಿದರು.</p>.<p>‘ಪೀಠಾರೋಹಣ ಸಂದರ್ಭದಲ್ಲಿ ರಾಜ್ಯದಲ್ಲಿರುವ ವಾಸವಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ವೃದ್ಧಾಶ್ರಮ, ಅನಾಥಾಶ್ರಮ ಹಾಗೂ ಆಸ್ಪತ್ರೆಗಳಲ್ಲಿ ಅನ್ನದಾನ ಇರಲಿದೆ. ಜೂನ್ 17ರಿಂದಪೀಠಾರೋಹಣದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಫೇಸ್ಬುಕ್ ಹಾಗೂ ಯುಟ್ಯೂಬ್ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗುವುದು.ಕಾರ್ಯಕ್ರಮಕ್ಕೆ ಶುಭಕೋರುವ ವಿಡಿಯೊಗಳನ್ನು ಇಮೇಲ್–kavmss@gmail.com ಅಥವಾ 9663900439 ಸಂಖ್ಯೆಗೆ ವಾಟ್ಸ್ಆ್ಯಪ್ ಮಾಡಬಹುದು’ಎಂದರು.</p>.<p>1989ರಲ್ಲಿ ಜನಿಸಿದ ಸಚ್ಚಿದಾನಂದ ಸರಸ್ವತಿ ಅವರು ಶಿವಮೊಗ್ಗದ ಉಮಾ ಹಾಗೂ ಭೂಪಾಳಂ ನಾಗರಾಜ್ ದಂಪತಿಯ ಪುತ್ರ. ಶಿವಮೊಗ್ಗದ ವಾಸವಿ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಕ್ರೈಸ್ಟ್ ವಿಶ್ವವಿದ್ಯಾಲಯದಿಂದ ನಿರ್ವಹಣೆ ವಿಷಯದಲ್ಲಿ ಚಿನ್ನದ ಪದಕದೊಂದಿಗೆ ಪದವಿ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>