<p><strong>ಬೆಂಗಳೂರು</strong>: ಬಿಟ್ ಕಾಯಿನ್ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾದಳದ (ಎಸ್ಐಟಿ) ಅಧಿಕಾರಿಗಳು, ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.</p>.<p>ಹಿಂದೆಯೂ ಸಂದೀಪ್ ಪಾಟೀಲ ಅವರನ್ನು ವಿಚಾರಣೆ ನಡೆಸಿದ್ದ ಎಸ್ಐಟಿ, ಮತ್ತೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿತ್ತು. ಸಂದೀಪ್ ಪಾಟೀಲ ಅವರನ್ನು ಮಂಗಳವಾರ, ಎಸ್ಐಟಿ ಮುಖ್ಯಸ್ಥ ಮನೀಶ್ ಕರ್ಬೀಕರ್ ಅವರು ಒಂದು ತಾಸು ವಿಚಾರಣೆ ನಡೆಸಿದರು.</p>.<p>ಕೆ.ಜಿ.ನಗರ, ಅಶೋಕನಗರ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳ ಪೈಕಿ ಎರಡು ಪ್ರಕರಣಗಳಲ್ಲಿ ಹಿಂದೆ ಸಂದೀಪ್ ಪಾಟೀಲ ಹೇಳಿಕೆ ದಾಖಲಿಸಲಾಗಿತ್ತು. ಈಗ ಉಳಿದ ಪ್ರಕರಣಗಳಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಮುಖ ಆರೋಪಿ ಕೃಷ್ಣ ಅಲಿಯಾಸ್ ಶ್ರೀಕಿ, ಮೂವರು ಇನ್ಸ್ಪೆಕ್ಟರ್ಗಳು, ಖಾಸಗಿ ಸೈಬರ್ ಲ್ಯಾಬ್ ಮಾಲೀಕ ಸೇರಿ ಐವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಶ್ರೀಧರ್ ಪೂಜಾರ್ ತಲೆಮರೆಸಿಕೊಂಡಿದ್ದು ಶೋಧ ಮುಂದುವರಿದಿದೆ’ ಎಂದು ಮೂಲಗಳು ಹೇಳಿವೆ.</p>.<p>ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ಅಧಿಕಾರಿಗಳು ಸೋಮವಾರ ವಿಚಾರಣೆ ನಡೆಸಿದ್ದರು. ಶ್ರೀಕಿಯ ಸ್ನೇಹಿತನೂ ಆಗಿರುವ ಅಧಿಕಾರಿಯ ಪುತ್ರ ಇತ್ತೀಚೆಗೆ ₹ 47 ಲಕ್ಷ ಬೆಲೆ ಬಾಳುವ ಐಷಾರಾಮಿ ಕಾರು ಖರೀದಿಸಿದ್ದ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಟ್ ಕಾಯಿನ್ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾದಳದ (ಎಸ್ಐಟಿ) ಅಧಿಕಾರಿಗಳು, ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.</p>.<p>ಹಿಂದೆಯೂ ಸಂದೀಪ್ ಪಾಟೀಲ ಅವರನ್ನು ವಿಚಾರಣೆ ನಡೆಸಿದ್ದ ಎಸ್ಐಟಿ, ಮತ್ತೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿತ್ತು. ಸಂದೀಪ್ ಪಾಟೀಲ ಅವರನ್ನು ಮಂಗಳವಾರ, ಎಸ್ಐಟಿ ಮುಖ್ಯಸ್ಥ ಮನೀಶ್ ಕರ್ಬೀಕರ್ ಅವರು ಒಂದು ತಾಸು ವಿಚಾರಣೆ ನಡೆಸಿದರು.</p>.<p>ಕೆ.ಜಿ.ನಗರ, ಅಶೋಕನಗರ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳ ಪೈಕಿ ಎರಡು ಪ್ರಕರಣಗಳಲ್ಲಿ ಹಿಂದೆ ಸಂದೀಪ್ ಪಾಟೀಲ ಹೇಳಿಕೆ ದಾಖಲಿಸಲಾಗಿತ್ತು. ಈಗ ಉಳಿದ ಪ್ರಕರಣಗಳಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಮುಖ ಆರೋಪಿ ಕೃಷ್ಣ ಅಲಿಯಾಸ್ ಶ್ರೀಕಿ, ಮೂವರು ಇನ್ಸ್ಪೆಕ್ಟರ್ಗಳು, ಖಾಸಗಿ ಸೈಬರ್ ಲ್ಯಾಬ್ ಮಾಲೀಕ ಸೇರಿ ಐವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಶ್ರೀಧರ್ ಪೂಜಾರ್ ತಲೆಮರೆಸಿಕೊಂಡಿದ್ದು ಶೋಧ ಮುಂದುವರಿದಿದೆ’ ಎಂದು ಮೂಲಗಳು ಹೇಳಿವೆ.</p>.<p>ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ಅಧಿಕಾರಿಗಳು ಸೋಮವಾರ ವಿಚಾರಣೆ ನಡೆಸಿದ್ದರು. ಶ್ರೀಕಿಯ ಸ್ನೇಹಿತನೂ ಆಗಿರುವ ಅಧಿಕಾರಿಯ ಪುತ್ರ ಇತ್ತೀಚೆಗೆ ₹ 47 ಲಕ್ಷ ಬೆಲೆ ಬಾಳುವ ಐಷಾರಾಮಿ ಕಾರು ಖರೀದಿಸಿದ್ದ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>