2020ನೇ ಸಾಲಿನಲ್ಲಿ ನಡೆದ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದಕ್ರೀಡಾಪಟುಗಳಿಗೆ ₹50 ಸಾವಿರ ನಗದು ಬಹುಮಾನ ನೀಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.
ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ: ಇಲಾಖೆಯು 2020ನೇ ಸಾಲಿನ ಕ್ರೀಡಾಪಟುಗಳಿಗೆ ನೀಡುವ ‘ಏಕಲವ್ಯ ಪ್ರಶಸ್ತಿ’ ಹಾಗೂಕ್ರೀಡಾ ಪೋಷಕರಿಗೆ ನೀಡುವ ‘ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ’ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಅರ್ಜಿಗಳನ್ನು ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ವಿಳಾಸ:ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ.
ಸಂಪರ್ಕ:9480886470
ವಕೀಲ ವೃತ್ತಿಯ ತರಬೇತಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಕಾನೂನು ಪದವೀಧರ ಅಭ್ಯರ್ಥಿಗಳಿಂದ ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಕಾನೂನು ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಅಭ್ಯರ್ಥಿಗಳಿಗೆ 4 ವರ್ಷಗಳವರೆಗೆ ಪ್ರತಿ ತಿಂಗಳು ₹4 ಸಾವಿರ ತರಬೇತಿ ಭತ್ಯೆ ನೀಡಲಾಗುವುದು.
ಅರ್ಜಿಗಳನ್ನು ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲುಆಗಸ್ಟ್ 28 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ.
ಸಂಪರ್ಕ:080-22867628
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.