ಕೇಂದ್ರದ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಹಾಗೂ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಲ್.ವರ್ಮ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿ ಆಗುವುದಕ್ಕೂ ಮೊದಲು ದೇಶದಲ್ಲಿ ನಿರಾಶದಾಯಕ ಸ್ಥಿತಿ ಇತ್ತು. ಕಾಂಗ್ರೆಸ್ ಮತ್ತು ಯುಪಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಭ್ರಷ್ಟಾಚಾರದ ಹಗರಣಗಳು ನಿರಂತರ ಎಂಬಂತೆ ನಡೆದವು. ಆದರೆ, ಮೋದಿ ನೇತೃತ್ವದ ಸರ್ಕಾರವು ವರ್ಗ, ಜಾತಿ ಭೇದವಿಲ್ಲದೇ, ಭ್ರಷ್ಟಾಚಾರ ದೂರವಿಟ್ಟು ಬಡವರ ಅಭಿವೃದ್ಧಿಗೆ ಶ್ರಮಿಸಿತು. ಭ್ರಷ್ಟಾಚಾರವಿಲ್ಲದ ಯೋಜನೆಗೆ ಜನಧನ್ ಸ್ಪಷ್ಟ ಉದಾಹರಣೆ ಎಂದು ಹೇಳಿದರು.