ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆನೆ ಹೊತ್ತ ಮಹಿಳೆಗೆ ಕೈಕೊಟ್ಟರೂ.. ಗೋಪಾಲಯ್ಯನ ಕೈಬಿಡದ ಮಹಾಲಕ್ಷ್ಮೀ ಲೇಔಟ್ ಮಂದಿ

ಉಪಚುನಾವಣೆ ಫಲಿತಾಂಶ
Last Updated 10 ಡಿಸೆಂಬರ್ 2019, 5:02 IST
ಅಕ್ಷರ ಗಾತ್ರ

ಬೆಂಗಳೂರು:ಮಹಾಲಕ್ಷ್ಮೀಲೇಔಟ್ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

2013 ಹಾಗೂ 2018ರವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದ ಗೋಪಾಲಯ್ಯ ಈ ಬಾರಿ ಜೆಡಿಎಸ್‌ಗೆ ಕೈಕೊಟ್ಟು ಬಿಜೆಪಿಗೆ ಸೇರಿದ್ದರು. 2013ರಲ್ಲಿ ಕಾಂಗ್ರೆಸ್‌ ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎನ್‌.ಎಲ್‌.ನರೇಂದ್ರಬಾಬು ವಿರುದ್ಧ ಕ್ರಮವಾಗಿ 15370 ಮತ್ತು 41,100 ಮತಗಳಿಂದ ಗೆದ್ದಿದರು.

ಇದೀಗ ಆ ಅಂತರ 54,386ಕ್ಕೆ ಏರಿದೆ. ಆ ಮೂಲಕ ಉಪಚುನಾವಣೆ ನಡೆದ 15 ಕ್ಷೇತ್ರಗಳ ಪೈಕಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಎರಡನೇಅಭ್ಯರ್ಥಿ ಎನಿಸಿಕೊಂಡಿದ್ದಾರೆ.ಬಿಬಿಎಂಪಿಯ ಪೂರ್ವದ ಹೆಬ್ಬಾಗಿಲಿನಂತಿರುವ ಕೆ.ಆರ್‌.ಪುರ ಕ್ಷೇತ್ರದಲ್ಲಿಹ್ಯಾಟ್ರಿಕ್ ಗೆಲುವು ಸಾಧಿಸಿರುವಬಿಜೆಪಿ ಅಭ್ಯರ್ಥಿ ಬಿ.ಎ.ಬಸವರಾಜು (ಬೈರತಿ ಬಸವರಾಜು),ಕಾಂಗ್ರೆಸ್‌ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ 62,646 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT