ಪ್ರಿಯಾಂಕ್ ಅವರ ‘ಎಕ್ಸ್’ ಖಾತೆಯ ಪೋಸ್ಟ್ ವಿವರವನ್ನು ದೂರಿನಲ್ಲಿ ಲಗತ್ತಿಸಿದ್ದು, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರಿಗೆ ರಾಜ್ಯ ಸರ್ಕಾರವೂ ತಲಾ ₹4,000 ನೆರವು ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದನ್ನು ನಿಲ್ಲಿಸಿದೆ. ಇವರು ಮಾಡಿರುವ ಪಾಪಕ್ಕೆ ಜನರು ಸೂಕ್ತ ಉತ್ತರ ನೀಡಬೇಕು’ ಎಂದು ಪ್ರಧಾನಿ ಹೇಳಿದ್ದರು. ಅದನ್ನು ಕತ್ತರಿಸಿ, ‘ಕನ್ನಡಿಗರು ಪಾಪ ಮಾಡಿದ್ದಾರೆ’ ಎಂದು ಪ್ರಧಾನಿ ಹೇಳಿರುವುದಾಗಿ ತಿರುಚಿದ್ದಾರೆ’ ಎಂದು ದೂರಿದೆ.