ಬೆಂಗಳೂರು ಅಲ್ಲದೆ, ದಕ್ಷಿಣ ಕನ್ನಡ, ಮಂಡ್ಯ, ಕೋಲಾರ, ರಾಮನಗರ, ಮೈಸೂರು, ಬೆಳಗಾವಿ ಮುಂತಾದ ಕಡೆಗಳಲ್ಲಿ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನೀಡಿರುವ ಎಚ್ಚರಿಕೆಯ ಪ್ರಕಾರ, ಅಸ್ಸಾಂನಲ್ಲಿ ಎನ್.ಆರ್.ಸಿ ವಿವಾದ ಉಂಟಾದ ಬಳಿಕ ಬಾಂಗ್ಲಾ ವಲಸಿಗರು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಗೆ ತೆರಳಿದ್ದಾರೆ. ಇವರನ್ನು ಪತ್ತೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.