<p><strong>ಬೆಂಗಳೂರು:</strong> ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೂದಾಖಲೆಗಳನ್ನು ತಿರುಚಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಬ್ಯಾಟರಾಯನಪುರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ರಾಜಿನಾಮೆಗೆ ಒತ್ತಾಯಿಸಿದರು. </p>.<p>ಈ ವೇಳೆ ಪೋಲಿಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಕಾರರನ್ನು ಬಂಧಿಸಿ ಸಂಪಿಗೆಹಳ್ಳಿ ಸಹಾಯಕ ಪೊಲೀಸ್ ಠಾಣೆಯ ಮೈದಾನಕ್ಕೆ ಕರೆದೊಯ್ದು, ನಂತರ ಬಿಡುಗಡೆ ಮಾಡಲಾಯಿತು.</p>.<p>ಇದಕ್ಕೂ ಮುನ್ನ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ ‘ಸಚಿವರ ಮೇಲೆ ಆರೋಪವಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’ ಎಂದು ಆಗ್ರಹಿಸಿದರು.</p>.<p>ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ‘ದಾಖಲೆಗಳನ್ನು ತಿರುಚಿ, ಸರ್ಕಾರಿ ಆಸ್ತಿಯನ್ನು ಕಬಳಿಸಲು ಮುಂದಾಗಿರುವ ಗಂಭೀರ ಆರೋಪ ಸಚಿವರ ಮೇಲಿದೆ. ದಾಖಲೆಗಳೂ ಆರೋಪವನ್ನು ಪುಷ್ಟೀಕರಿಸುತ್ತಿವೆ. ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮುನಿಹನುಮಯ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಿ.ವೆಂಕಟೇಶ್, ಬಿ.ಎಸ್. ಅನಿಲ್ ಕುಮಾರ್, ಕೆ.ಡಿ. ಪ್ರತಾಪ್ ಗೌಡ, ಲೋಹಿತ್ ಗೌಡ, ತಿಮ್ಮೇಗೌಡ, ಎಲ್. ನಂಜಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೂದಾಖಲೆಗಳನ್ನು ತಿರುಚಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಬ್ಯಾಟರಾಯನಪುರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ರಾಜಿನಾಮೆಗೆ ಒತ್ತಾಯಿಸಿದರು. </p>.<p>ಈ ವೇಳೆ ಪೋಲಿಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಕಾರರನ್ನು ಬಂಧಿಸಿ ಸಂಪಿಗೆಹಳ್ಳಿ ಸಹಾಯಕ ಪೊಲೀಸ್ ಠಾಣೆಯ ಮೈದಾನಕ್ಕೆ ಕರೆದೊಯ್ದು, ನಂತರ ಬಿಡುಗಡೆ ಮಾಡಲಾಯಿತು.</p>.<p>ಇದಕ್ಕೂ ಮುನ್ನ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ ‘ಸಚಿವರ ಮೇಲೆ ಆರೋಪವಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’ ಎಂದು ಆಗ್ರಹಿಸಿದರು.</p>.<p>ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ‘ದಾಖಲೆಗಳನ್ನು ತಿರುಚಿ, ಸರ್ಕಾರಿ ಆಸ್ತಿಯನ್ನು ಕಬಳಿಸಲು ಮುಂದಾಗಿರುವ ಗಂಭೀರ ಆರೋಪ ಸಚಿವರ ಮೇಲಿದೆ. ದಾಖಲೆಗಳೂ ಆರೋಪವನ್ನು ಪುಷ್ಟೀಕರಿಸುತ್ತಿವೆ. ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮುನಿಹನುಮಯ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಿ.ವೆಂಕಟೇಶ್, ಬಿ.ಎಸ್. ಅನಿಲ್ ಕುಮಾರ್, ಕೆ.ಡಿ. ಪ್ರತಾಪ್ ಗೌಡ, ಲೋಹಿತ್ ಗೌಡ, ತಿಮ್ಮೇಗೌಡ, ಎಲ್. ನಂಜಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>