ಪಕ್ಷದ ಮುಖಂಡರೊಂದಿಗೆ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು,‘ಈ ಬಾರಿ ರಾಮೋಜಿಗೌಡ ಅವರು ಗೆಲ್ಲುವುದು ಖಚಿತ. ಅದನ್ನು ತಪ್ಪಿಸಲು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ನಮ್ಮ ಅಭ್ಯರ್ಥಿಯ ಕುಟುಂಬದವರು ನೂರಾರು ವರ್ಷಗಳಿಂದ ಕೋಲಾರದಲ್ಲಿ ನೆಲೆಸಿದ್ದಾರೆ. ಆದರೆ, ಅವರು ರಾಜ್ಯದವರಲ್ಲ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ’ ಎಂದರು.