<p><strong>ಬೆಂಗಳೂರು: </strong>ವಿಧಾನಸಭೆ ಚುನಾವಣೆ ಉದ್ದೇಶಿತ ನಾಲ್ಕು ಯಾತ್ರೆಗಳು, ಪ್ರಣಾಳಿಕೆ ತಯಾರಿಕೆ ಸಲಹಾ ಅಭಿಯಾನ, ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೊ–ವ್ಯಾನ್ ಪ್ರಚಾರಕ್ಕಾಗಿ ಬಿಜೆಪಿ<br />ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಬಿ.ವೈ.ವಿಜಯೇಂದ್ರ, ಡಾ.ಕೆ.ಸುಧಾಕರ್ ಇದರಲ್ಲಿ ಸ್ಥಾನ ಪಡೆದಿದ್ದಾರೆ.</p>.<p>ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು, ಸಹಪ್ರಮುಖರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ.</p>.<p>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರನ್ನು ಯಾತ್ರೆಯ ಪ್ರಮುಖರನ್ನಾಗಿ, ರಾಜ್ಯ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್<br />ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ಸಹ ಪ್ರಮುಖರನ್ನಾಗಿ ನೇಮಿಸಲಾಗಿದೆ.</p>.<p>ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಗಳಿಗೆ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಜಗದೀಶ ಹಿರೇಮನಿ ಮತ್ತು ಯಶಪಾಲ್ ಸುವರ್ಣ ಅವರನ್ನು ಸಹ–ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<p>ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಯ ಕ್ರಮಗಳ ಫಲಾನುಭವಿಗಳ ಸಮ್ಮೇಳನಕ್ಕೆ ಸಂಚಾಲಕರನ್ನಾಗಿ ಹಾಲಪ್ಪ ಬಸಪ್ಪ ಆಚಾರ್ ಅವರನ್ನು, ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಶಾಸಕ ಪಿ.ರಾಜೀವ್ ಅವರನ್ನು ಸಹ– ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<p>ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನಕ್ಕೆ ಸಚಿವ ಡಾ.ಕೆ.ಸುಧಾಕರ್ ಸಂಚಾಲಕರಾಗಿದ್ದು, ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಎಸ್.ಸುರೇಶ್ ಕುಮಾರ್, ಅಭಯ ಪಾಟೀಲ, ರಾಜಕುಮಾರ್ ಪಾಟೀಲ ತೇಲ್ಕೂರು, ಎನ್.ಮಹೇಶ್, ಪಿ.ರಾಜೀವ್ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಸಭೆ ಚುನಾವಣೆ ಉದ್ದೇಶಿತ ನಾಲ್ಕು ಯಾತ್ರೆಗಳು, ಪ್ರಣಾಳಿಕೆ ತಯಾರಿಕೆ ಸಲಹಾ ಅಭಿಯಾನ, ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೊ–ವ್ಯಾನ್ ಪ್ರಚಾರಕ್ಕಾಗಿ ಬಿಜೆಪಿ<br />ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಬಿ.ವೈ.ವಿಜಯೇಂದ್ರ, ಡಾ.ಕೆ.ಸುಧಾಕರ್ ಇದರಲ್ಲಿ ಸ್ಥಾನ ಪಡೆದಿದ್ದಾರೆ.</p>.<p>ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು, ಸಹಪ್ರಮುಖರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ.</p>.<p>ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರನ್ನು ಯಾತ್ರೆಯ ಪ್ರಮುಖರನ್ನಾಗಿ, ರಾಜ್ಯ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್<br />ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ಸಹ ಪ್ರಮುಖರನ್ನಾಗಿ ನೇಮಿಸಲಾಗಿದೆ.</p>.<p>ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಗಳಿಗೆ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಜಗದೀಶ ಹಿರೇಮನಿ ಮತ್ತು ಯಶಪಾಲ್ ಸುವರ್ಣ ಅವರನ್ನು ಸಹ–ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<p>ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಯ ಕ್ರಮಗಳ ಫಲಾನುಭವಿಗಳ ಸಮ್ಮೇಳನಕ್ಕೆ ಸಂಚಾಲಕರನ್ನಾಗಿ ಹಾಲಪ್ಪ ಬಸಪ್ಪ ಆಚಾರ್ ಅವರನ್ನು, ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಶಾಸಕ ಪಿ.ರಾಜೀವ್ ಅವರನ್ನು ಸಹ– ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<p>ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನಕ್ಕೆ ಸಚಿವ ಡಾ.ಕೆ.ಸುಧಾಕರ್ ಸಂಚಾಲಕರಾಗಿದ್ದು, ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಎಸ್.ಸುರೇಶ್ ಕುಮಾರ್, ಅಭಯ ಪಾಟೀಲ, ರಾಜಕುಮಾರ್ ಪಾಟೀಲ ತೇಲ್ಕೂರು, ಎನ್.ಮಹೇಶ್, ಪಿ.ರಾಜೀವ್ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>